ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm