ಬ್ರೇಕಿಂಗ್ ನ್ಯೂಸ್
24-07-24 06:52 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24: ಅಂಕೋಲಾದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿರುವ ಲಾರಿಯನ್ನು ಕೊನೆಗೂ ಪತ್ತೆ ಮಾಡಲಾಗಿದೆ. ಭೂಕುಸಿತ ಆಗಿರುವ ಪ್ರದೇಶದಲ್ಲೇ ಗಂಗಾವಳಿ ನದಿಯ ತಟದಲ್ಲಿ ಟ್ರಕ್ ಪತ್ತೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಟ್ವೀಟ್ ಮಾಡಿದ್ದಾರೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಕ್ಸ್ (ಟ್ವಿಟರ್) ನಲ್ಲಿ ಮಾಹಿತಿ ನೀಡಿದ್ದು, 'ಒಂದು ಟ್ರಕ್ ನೀರಿನಲ್ಲಿರುವುದು ಪತ್ತೆಯಾಗಿದೆ. ನೌಕಾಪಡೆಯ ಡೀಪ್ ಡೈವರ್ಗಳು ಶೀಘ್ರದಲ್ಲೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ ನದಿಯಿಂದ ಅದನ್ನು ಮೇಲೆತ್ತಲಿದ್ದಾರೆ. ನದಿಯಲ್ಲಿ ಮಣ್ಣು ಮೇಲೆತ್ತಲು ವಿಶೇಷ ರೀತಿಯ ಲಾಂಗ್ ಆರ್ಮ್ ಬೂಮರ್ ಯಂತ್ರವನ್ನು ಬಳಸಲಾಗುತ್ತಿದೆ ಎಂದಿದ್ದಾರೆ.
ಸುಧಾರಿತ ಡ್ರೋನ್ ಆಧಾರಿತ ಮಣ್ಣು ಅಥವಾ ನೀರಿನಾಳದಲ್ಲಿರುವ ಇರುವ ಲೋಹಗಳನ್ನು ಶೋಧ ಮಾಡಬಲ್ಲ ಸಿಸ್ಟಮ್ ಅನ್ನು ಸಹ ಹುಡುಕಾಟಕ್ಕಾಗಿ ನಿಯೋಜಿಸಲಾಗಿದೆ. ನೀರಿನಲ್ಲಿ ನಾಪತ್ತೆಯಾದ ದೇಹಗಳಿಗಾಗಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹುಡುಕಾಟ ನಡೆಸುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತದ ಒಂಬತ್ತನೇ ದಿನ ವಿಶೇಷ ರೀತಿಯ ಯಂತ್ರ ತರಿಸಲಾಗಿದ್ದು ಅದು 60 ಅಡಿ ಆಳದವರೆಗೆ ಹುಡುಕಬಲ್ಲ ಸಾಮರ್ಥ್ಯ ಹೊಂದಿದೆ. ಪೊಲೀಸ್ ವಾಹನದೊಂದಿಗೆ ವಾಹನವನ್ನು ಸ್ಥಳಕ್ಕೆ ತರಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕಾರವಾರ ಎಸ್ಪಿ ನಾರಾಯಣ್, ಇಸ್ರೋ ನೆರವಿನಲ್ಲಿ ಟ್ರಕ್ ಇರುವ ಸ್ಥಳವನ್ನು ಪತ್ತೆ ಮಾಡಲಾಗಿದೆ. ಕಾರ್ಯಾಚರಣೆಗೆ ನೌಕಾಪಡೆಯಿಂದ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿದ್ದೇವೆ. ನಿಖರವಾಗಿ ಸ್ಥಳದ ಕುರಿತು ಮಾಹಿತಿ ಪಡೆದ ನಂತರ ಮೃತದೇಹಗಳನ್ನು ಹುಡುಕಾಟ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
The Karnataka government clarified on Wednesday that a truck was located in the Gangavali river amid an ongoing search for Kozhikode native Arjun who was missing after a landslide in Shirur. "One truck has been definitively located in the water and that the naval deep divers will attempt anchoring shortly.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am