ಬ್ರೇಕಿಂಗ್ ನ್ಯೂಸ್
26-07-24 09:00 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.26: ಕರ್ನಾಟಕ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯವಾಗಲಿದ್ದು, ನೂತನ ಕಾರ್ಯದರ್ಶಿ ಹುದ್ದೆಗೆ ಅವರ ಪತ್ನಿ ಶಾಲಿನಿ ರಜನೀಶ್ ನೇಮಕವಾಗೋದು ಬಹುತೇಕ ಅಂತಿಮ ಆಗಿದೆ. ಮುಖ್ಯ ಕಾರ್ಯದರ್ಶಿ ಯಾರಾಗಬೇಕು ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
ಕರ್ನಾಟಕ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ನಿವೃತ್ತಿ ಬೆನ್ನಲ್ಲೇ ಪತ್ನಿ ಶಾಲಿನಿ ರಜನೀಶ್ ಮುಖ್ಯ ಕಾರ್ಯದರ್ಶಿ ಆಗಲಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಚಿವ ಎಚ್ ಕೆ ಪಾಟೀಲ್ ಮಾಧ್ಯಮಕ್ಕೆ ಮಾತನಾಡಿ, ಹಾಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಐದು ದಿನದಲ್ಲಿ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಸಿಎಸ್ ಆಗಿ ಶಾಲಿನಿ ರಜನೀಶ್ಅವರನ್ನು ನೇಮಿಸಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
ರಜನೀಶ್ ಗೋಯೆಲ್ ಅಧಿಕಾರಾವಧಿ ಜುಲೈ 31ಕ್ಕೆ ಮುಕ್ತಾಯ ಆಗಲಿರುವುದರಿಂದ ನೂತನ ಕಾರ್ಯದರ್ಶಿ ಯಾರು ಎಂಬ ಚರ್ಚೆ ನಡೆದಿತ್ತು. ಜ್ಯೇಷ್ಠತೆಯಲ್ಲಿ ಕ್ರಮವಾಗಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್ ಸೇಠ್, ಅಭಿವೃದ್ಧಿ ಆಯುಕ್ತರಾಗಿರುವ ಶಾಲಿನಿ ರಜನೀಶ್ ಅವರ ಹೆಸರುಗಳು ಕೇಳಿಬಂದಿದ್ದವು. ಇಬ್ಬರ ಪೈಕಿ ಶಾಲಿನಿ ರಜನೀಶ್ ಅವರೇ ಮುಖ್ಯ ಕಾರ್ಯದರ್ಶಿ ಹುದ್ದೆ ಅಲಂಕರಿಸುವ ಸಾಧ್ಯತೆ ದಟ್ಟವಾಗಿತ್ತು. ಇದೀಗ ಶಾಲಿನಿ ರಜನೀಶ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗುವುದು ಖಚಿತವಾಗಿದೆ.
Shalini Rajneesh will be the new Chief Secretary of Karnataka, Law and Parliamentary Affairs Minister H K Patil said on Friday. The 1989 batch IAS officer will succeed her husband and outgoing Chief Secretary Rajneesh Goel, who is scheduled to retire on July 31.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm