ಬ್ರೇಕಿಂಗ್ ನ್ಯೂಸ್
26-07-24 10:39 pm HK News Desk ಕರ್ನಾಟಕ
ಕಾರವಾರ, ಜುಲೈ 26: ಅಂಕೋಲಾ ಗುಡ್ಡ ಕುಸಿತದ ಕಾರ್ಯಾಚರಣೆ 11ನೇ ದಿನ ಮುಂದುವರಿದರೂ, ಯಾವುದೇ ಫಲ ಸಿಕ್ಕಿಲ್ಲ. ಇಸ್ರೋ ಮತ್ತು ನೇವಿ ತಜ್ಞರು ನಡೆಸಿದ ಡ್ರೋಣ್ ಕ್ಯಾಮರಾ ಪರಿಶೀಲನೆಯಲ್ಲಿ ರಸ್ತೆಯಿಂದ 60 ಮೀಟರ್ ದೂರದಲ್ಲಿ ನದಿಯ ಮಧ್ಯೆ ಲಾರಿಯ ಅವಶೇಷ ಇದೆಯೆಂಬ ಮಾಹಿತಿ ಸಿಕ್ಕಿದೆ. ಆದರೆ, ಭಾರೀ ಮಳೆಯ ಕಾರಣ ನದಿಯಲ್ಲಿ ಪ್ರವಾಹದ ರೀತಿ ನೀರು ಹರಿಯುತ್ತಿದ್ದು, ಇದರಿಂದಾಗಿ ಸ್ಕೂಬಾ ಡೈವರ್ ಗಳು ನೀರಿನಾಳಕ್ಕೆ ಇಳಿಯಲು ಸಾಧ್ಯವಾಗಿಲ್ಲ.
ನೇವಿ ಮಾಹಿತಿ ಪ್ರಕಾರ, 15-20 ಅಡಿ ಆಳದಲ್ಲಿ ಲಾರಿ ಇದೆ ಎನ್ನಲಾಗುತ್ತಿದೆ. ಆದರೆ, ನೀರಿನಲ್ಲಿ ಭಾರೀ ಸೆಳೆತ ಇರುವುದು ಮತ್ತು ಮಣ್ಣು, ಕಲ್ಲಿನೊಂದಿಗೆ ತೀವ್ರ ಗತಿಯಲ್ಲಿ ಸಾಗುವುದರಿಂದ ಅದರ ನಡುವೆ ಆಳಕ್ಕಿಳಿದರೂ, ಯಾವುದೇ ದೃಶ್ಯ ಕಣ್ಣಿಗೆ ಕಾಣದು ಎನ್ನುವುದು ಸ್ಕೂಬಾ ಡೈವರ್ ಗಳ ವಾದ. ಸಮುದ್ರದಲ್ಲಿ ಡೈವ್ ಮಾಡುವುದು ಸುಲಭ ಮತ್ತು ಆಳಕ್ಕಿಳಿದು ನೆಲವನ್ನು ನೋಡುವುದೂ ಸಾಧ್ಯ. ಆದರೆ, ರಭಸದಲ್ಲಿ ಮಣ್ಣು, ಕಸಗಳ ಜೊತೆಗೆ ಹರಿಯುವ ನದಿ ನೀರಿನಲ್ಲಿ ಆಳಕ್ಕಿಳಿದು ಅವಶೇಷ ಪತ್ತೆ ಮಾಡಲು ಕಷ್ಟ. ನದಿ ನೀರಿಗಿಳಿದರೂ, ಹೊರ ಬರುವುದೇ ಕಷ್ಟ ಎಂದು ನೇವಿ ಅಧಿಕಾರಿಗಳು ಹೇಳುತ್ತಾರೆ.
ಇದೇ ವೇಳೆ, ಕೇರಳದ ಪಿಡಬ್ಲ್ಯುಡಿ ಮತ್ತು ಪ್ರವಾಸೋದ್ಯಮ ಸಚಿವ ಪಿ.ಎ. ಮಹಮ್ಮದ್ ರಿಯಾಸ್ ಮತ್ತು ಶಾಸಕ ಕೆಎಂ ಸಸೀಂದ್ರನ್ ದುರಂತ ನಡೆದಿರುವ ಸ್ಥಳಕ್ಕೆ ಆಗಮಿಸಿದ್ದಾರೆ. ಈಗಾಗಲೇ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಕನ್ನಡ ಮತ್ತು ಮಲೆಯಾಳ ಭಾಷೆ ಅರಿತಿರುವ ಕಾರಣ ದುರಂತ ಜಾಗದಲ್ಲೇ ಬೀಡು ಬಿಟ್ಟಿದ್ದು, ಮಲೆಯಾಳಂ ವಾಹಿನಿಗಳಿಗೆ ಸ್ಥಳದಲ್ಲಿನ ಬೆಳವಣಿಗೆ ಬಗ್ಗೆ ಮಾಹಿತಿಗಳನ್ನು ನೀಡುತ್ತಿದ್ದಾರೆ. ಇಡೀ ಕೇರಳದಲ್ಲಿ ಜನರು ಲಾರಿ ಚಾಲಕ ಅರ್ಜುನ್ ಜೀವಂತ ಬರುವಂತೆ ಹಾರೈಸುತ್ತಿದ್ದಾರೆ. ಕೇರಳದ ಲೀಡಿಂಗ್ ಚಾನೆಲ್ಗಳು ಅರ್ಜುನ್ ನಾಪತ್ತೆ ಸುದ್ದಿಯನ್ನೇ ಇಡೀ ದಿನ ಪ್ರಮುಖವಾಗಿ ಬಿತ್ತರಿಸುತ್ತಿದ್ದು, ಇಡೀ ದೇಶದ ಗಮನ ಸೆಳೆಯುವಂತೆ ಮಾಡಿದೆ.
The search for three people including Kozhikode native Arjun, who went missing in a massive landslide, was severely hindered by heavy rain in Shirur on Friday. The downpour began just as Indian Navy scuba divers were preparing to dive into the deep waters of the Gangavali River.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm