ಬ್ರೇಕಿಂಗ್ ನ್ಯೂಸ್
28-07-24 01:30 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.28: ರಾಜ್ಯದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕಾಗಿಯೇ ತಡಕಾಡುತ್ತಿದೆ. ಇದರ ನಡುವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿ ಸದಸ್ಯರಿಗೆ ಗೌರವಧನ, ಭತ್ಯೆಗಳನ್ನು ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಮಾಡಿದೆ. ರಾಜ್ಯ ಮಟ್ಟದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಿಗೆ ಸಂಪುಟ ದರ್ಜೆ ಸ್ಥಾನಮಾನ, ಉಪಾಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನ ನೀಡಲಾಗಿದ್ದು, ಇವರು ತಲಾ 12 ಆಪ್ತ ಸಿಬಂದಿಗಳನ್ನು ಹೊಂದಬಹುದಾಗಿದೆ.
ಆಮೂಲಕ ಸಚಿವ ಸ್ಥಾನ ಸಿಗದ ಶಾಸಕರಿಗೆ ಬೇರೆ ರೀತಿಯಲ್ಲಿ ಮಣೆ ಹಾಕುವ ತಂತ್ರ ಒಂದೆಡೆಯಾದರೆ, ರಾಜ್ಯ ಸರಕಾರದ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯೂ ಆಗಲಿದೆ. ಜಿಲ್ಲಾ ಸಮಿತಿಯ ಅಧ್ಯಕ್ಷರಿಗೆ 40 ಸಾವಿರ ಮಾಸಿಕ ಗೌರವಧನ, ಉಪಾಧ್ಯಕ್ಷರಿಗೆ ಪ್ರತಿ ಸಭೆಗೆ 1200 ರೂ. ಭತ್ಯೆ, ಸದಸ್ಯರಿಗೆ ಪ್ರತಿ ಸಭೆಗೆ 1100 ರೂ. ಭತ್ಯೆ ಸಿಗಲಿದೆ. ತಾಲೂಕು ಸಮಿತಿ ಅಧ್ಯಕ್ಷರಿಗೆ 25 ಸಾವಿರ ರೂ. ಮಾಸಿಕ ಗೌರವಧನ, ಸದಸ್ಯರಿಗೆ ಒಂದು ಸಾವಿರ ರೂ. ಪ್ರತಿ ಸಭೆಗೆ ಭತ್ಯೆ ಸಿಗಲಿದೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಇರುವ ಸಮಿತಿಗಳು ತಿಂಗಳಿಗೆ ಗರಿಷ್ಠ ಎರಡು ಸಭೆಗಳನ್ನು ನಡೆಸಲು ಅವಕಾಶ ಇದೆ.
ಸರಕಾರದ ಗ್ಯಾರಂಟಿ ಯೋಜನೆಗಳು ನಾನಾ ಇಲಾಖೆಗಳ ಮೂಲಕ ಅನುಷ್ಠಾನಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮನ್ವಯ ಸಾಧಿಸುವ ದೃಷ್ಟಿಯಿಂದ ಸಿಬಂದಿ ಮತ್ತು ಆಡಳಿತ ಸುದಾರಣೆ ಇಲಾಖೆ ಕಾರ್ಯದರ್ಶಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಜಿಲ್ಲಾ ಸಮಿತಿಗಳು ಸಭೆ ನಡೆಸಲು ಜಿಪಂ ಸಭಾಂಗಣ ಹಾಗೂ ತಾಲೂಕು ಸಮಿತಿಗಳು ತಾಪಂ ಸಭಾಂಗಣಗಳನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ.
ಜಿಪಂ ಆವರಣದಲ್ಲಿ ಕಚೇರಿ ವ್ಯವಸ್ಥೆ
ಜಿಲ್ಲಾ ಸಮಿತಿಗಳಿಗೆ ಸಂಬಂಧಿತ ಜಿಪಂ ಕಚೇರಿ ಆವರಣದಲ್ಲಿ ಕಚೇರಿ ವ್ಯವಸ್ಥೆ ಹಾಗೂ ಅಗತ್ಯವಿರುವ ಪೀಠೋಪಕರಣ ಒದಗಿಸುವ ಹೊಣೆಗಾರಿಕೆಯನ್ನು ಜಿಪಂ ಸಿಇಓಗಳಿಗೆ ನೀಡಲಾಗಿದೆ. ತಾಲೂಕು ಸಮಿತಿಗಳಿಗೆ ತಾಪಂ ಕಚೇರಿ ಆವರಣದಲ್ಲಿ ಕಚೇರಿ ಹಾಗೂ ಪೀಠೋಪಕರಣ ಒದಗಿಸುವ ವ್ಯವಸ್ಥೆಯನ್ನು ಆಯಾ ತಾಪಂ ಕಾರ್ಯ ನಿರ್ವಹಣಾ ಅಧಿಕಾರಿ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ನಡೆಸುವ ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಗೆ ಗ್ಯಾರಂಟಿ ಸಮಿತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಆಹ್ವಾನಿಸುವುದು ಕಡ್ಡಾಯವಾಗಿದ್ದು ತಾಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ನಡೆಸುವ ಕೆಡಿಪಿ ಸಭೆಗೆ ತಾಲೂಕು ಮಟ್ಟದ ಸಮಿತಿ ಅಧ್ಯಕ್ಷರನ್ನು ಆಹ್ವಾನಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
state-government fixes honorarium and allowances for guarantee implementation committee. Fixation of Salary, Allowance for Guarantee Committee Officers, How much honorarium to whom by karnataka government
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am