ಬ್ರೇಕಿಂಗ್ ನ್ಯೂಸ್
28-07-24 05:48 pm HK News Desk ಕರ್ನಾಟಕ
ಮೈಸೂರು, ಜುಲೈ.28: ಮೈಸೂರು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿಯ ಹಣೆಗೆ ಚಾಮರಾಜನಗರದ ಸಂಸದ ಸುನೀಲ್ ಬೋಸ್ ಕುಂಕುಮ ಇಟ್ಟಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಮೊನ್ನೆ (ಜುಲೈ 26) ಮೂರನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮರಾಜನಗರದ ನೂತನ ಸಂಸದ ಸುನೀಲ್ ಬೋಸ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಚಾಮುಂಡೇಶ್ವರಿ ತಾಯಿ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಬಿ.ಕೆ. ಸವಿತಾ ಅವರ ಹಣೆಗೆ ಕುಂಕುಮ ಇಟ್ಟಿದ್ದಾರೆ. ಅಲ್ಲದೇ ತಾಯಿಯ ಆಶೀರ್ವಾದದ ಪ್ರಸಾದವನ್ನು ಸಹ ಅರ್ಚಕರು ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಬಿ.ಕೆ. ಸವಿತಾ ಅವರಿಗೆ ನೀಡಿದ್ದಾರೆ.
ಈ ಫೋಟೋಗಳು ಸದ್ಯ ವೈರಲ್ ಆಗುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಸಂಸದರೊಬ್ಬರು ಮಹಿಳಾ ಅಧಿಕಾರಿ ಹಣೆಗೆ ಕುಂಕುಮ ಇಟ್ಟ ಸಂಗತಿ ಇದೀಗ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಚಾಮುಂಡಿ ಬೆಟ್ಟಕ್ಕೆ ಸಂಸದ ಸುನೀಲ್ ಬೋಸ್ ಪ್ರವಾಸೋದ್ಯಮ ಇಲಾಖೆ ನಿರ್ದೇಶಕಿ ಜೊತೆಯಾಗಿ ಬಂದಿದ್ದರು. ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಜೊತೆಗೆ ಬೆಂಬಲಿಗರ ಸಮ್ಮುಖದಲ್ಲೇ ನಿರ್ದೇಶಕಿ ಸವಿತಾ ಅವರ ಹಣೆಗೆ ಸುನೀಲ್ ಬೋಸ್ ಕುಂಕುಮ ಇಟ್ಟಿದ್ದರು. ಘಟನೆಯ ವಿಡಿಯೋ, ಫೋಟೊಗಳು ವೈರಲ್ ಆಗಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಚಾಮರಾಜನಗರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಸುನೀಲ್ ಬೋಸ್ ಚುನಾವಣಾ ಆಯೋಗಕ್ಕೆ ಅಫಿಡೆವಿಟ್ ಸಲ್ಲಿಸುವ ವೇಳೆ ಹೆಂಡತಿ ಮಕ್ಕಳ ಹಾಗೂ ಹಿಂದೂ ಅವಿಭಕ್ತ ಕುಟುಂಬ ಬಗ್ಗೆ ನಿಖರವಾದ ಮಾಹಿತಿ ನೀಡಿರಲಿಲ್ಲ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ತಮಗೆ ಮದುವೆಯಾಗಿಲ್ಲ ಎಂದು ಸುನೀಲ್ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು ಎನ್ನಲಾಗಿದೆ.
ಸುನೀಲ್ ಬೋಸ್ ತಮ್ಮ ವೈವಾಹಿಕ ಜೀವನವನ್ನು ಮರೆಮಾಚಿದ್ದರು. ಇದಕ್ಕೆ ಪ್ರತಿಯಾಗಿ ಚಾಮರಾಜನಗರ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಕೂಡ ನೀಡಿತ್ತು. ಸುನೀಲ್ ಬೋಸ್ ಅವರು ಎಂ.ಕೆ. ಸವಿತಾ ಅವರನ್ನು ಮದುವೆಯಾಗಿದ್ದು, ಆರು ವರ್ಷದ ಹೆಣ್ಣುಮಗುವಿದೆ ಎಂದು ಫೋಟೊ ಸಹಿತ ದೂರು ನೀಡಿದ್ದರು.
ಇದೀಗ ಚಾಮುಂಡಿ ಬೆಟ್ಟದ ಫೋಟೋ ಸಖತ್ ವೈರಲ್ ಆಗುತ್ತಿದ್ದು, ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ. ಈ ಬಾರಿ ಸಂಸದರ ಫೋಟೋ ವೈರಲ್ ಆಗುತ್ತಿದ್ದಂತೆ ಬಿಜೆಪಿ ನಾಯಕರು ಚುನಾವಣಾ ಅಧಿಕಾರಿಗಳಿಗೆ ಮತ್ತೆ ದೂರು ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ.
MP Sunil Bose picture of temple with lady KAS officer goes viral. MP who had stated that he wasn't married in the affidavit was seen keeping kumkum on kas lady officer as wife at temple in Mysuru.The picture has gone viral on social media
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm