ಬ್ರೇಕಿಂಗ್ ನ್ಯೂಸ್
29-07-24 01:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28: ಮದುವೆ ನಿಶ್ಚಯವಾಗಿದ್ದ ಹೆಣ್ಣು ಮಗಳೊಬ್ಬಳು ನಿನ್ನೆ ಕಸದ ಲಾರಿಯಡಿಗೆ ಸಿಲುಕಿ ದುರಂತವಾಗಿ ಸಾವನ್ನಪ್ಪಿದ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಬೆಳಗ್ಗೆ ಮದುವೆ ಬಗ್ಗೆ ಪ್ರಸ್ತಾಪವಾಗಿ ಸಂಜೆ ವೇಳೆಗೆ BBMP ಕಸದ ಲಾರಿಯಡಿಗೆ ಸಿಲುಕಿ ಶಿಲ್ಪ ಎಂಬಾಕೆ ಕೊನೆಯುಸಿರೆಳೆದಿದ್ದಾಳೆ.
ನಿನ್ನೆ ರಾತ್ರಿ 9 ಗಂಟೆಗೆ ಪ್ರಶಾಂತ್ (25) ಮತ್ತು ಶಿಲ್ಪ (25) ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ BBMP ಕಸದ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಐಟಿಪಿಎಲ್ ಟಿಸಿಎಸ್ನಲ್ಲಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಶಿಲ್ಪ ಆಂಧ್ರದ ಇಂದುಪುರ ನಿವಾಸಿ. ನಾಗವಾರದ ಪಿಜಿಯಲ್ಲಿ ವಾಸ ಮಾಡಿಕೊಂಡಿದ್ದಳು. ಈಕೆ ತಂದೆ ವೆಂಕಟರಾಮ ರೆಡ್ಡಿ. ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.
ವೆಂಕಟರಾಮ ರೆಡ್ಡಿಗೆ ಒಟ್ಟು ಮೂವರು ಹೆಣ್ಣು ಮಕ್ಕಳು. ಇಬ್ಬರು ಹೆಣ್ಣುಮಕ್ಕಳಿಗೆ ಮದುವೆ ಆಗಿದೆ. ಶಿಲ್ಪ ಕೊನೆಯ ಮಗಳು. ಆಕೆಯ ಮದುವೆ ತಯಾರಿ ಕೂಡ ನಡೀತಿತ್ತು. ಆದರೆ ಅಷ್ಟರಲ್ಲಿ ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾಳೆ.
ತಂದೆ ವೆಂಕಟರಾಮ ರೆಡ್ಡಿ ಮಗಳ ಮದುವೆಗೆ ಚಿನ್ನವನ್ನು ಮಾಡಿಸಿಟ್ಟಿದ್ದನು. ಭಾನುವಾರ ಬೆಳಗ್ಗೆ ಕೂಡ ಮದುವೆ ಮಾತುಕತೆ ಪ್ರಸ್ತಾಪ ಆಗಿತ್ತು. ಆದರೆ ನಿನ್ನೆ ಸಂಜೆ ಹೊತ್ತಿಗೆ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದಾಳೆ.
ಶಿಲ್ಪ ಮೃತದೇಹ ಬೌರಿಂಗ್ ಆಸ್ಪತ್ರೆ ಶವಾಗಾರದಲ್ಲಿದ್ದು, ಆಕೆಯನ್ನು ಕಾಣಲು ಪೋಷಕರು ಆಗಮಿಸಿದ್ದಾರೆ. ಶವಾಗಾರದ ಬಳಿ ಶಿಲ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಿನ್ನೆ ಭಾನುವಾರ ರಜೆ ಹಿನ್ನೆಲೆಯಲ್ಲಿ ಸಂಜೆ ಸ್ನೇಹಿತನ ಜೊತೆ ಊಟಕ್ಕೆ ಎಂದು ಹೋಗಿದ್ದಳು. ರಾತ್ರಿಯ ಊಟ ಮುಗಿಸಿ ಮೆಜೆಸ್ಟಿಕ್ನಿಂದ ಕೆ.ಆರ್.ಸರ್ಕಲ್ ಮಾರ್ಗವಾಗಿ ಬೈಕ್ನಲ್ಲಿ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್.ಸರ್ಕಲ್ ಕಡೆ ವೇಗವಾಗಿ ಬಂದ ಕಸದ ಲಾರಿ, ಬೈಕ್ಗೆ ಗುದ್ದಿದೆ. ಅಪಘಾತದ ರಭಸಕ್ಕೆ 10 ಮೀಟರ್ ನಷ್ಟು ದೂರ ಮೃತರ ದೇಹಗಳು ಹೋಗಿ ಬಿದ್ದಿವೆ.
ಪರಿಣಾಮ ರಸ್ತೆ ಮೇಲೆ ರಕ್ತ ಚೆಲ್ಲಿದೆ. ಕೂಡಲೇ ಅಪಘಾತಕ್ಕೊಳಗಾದವರನ್ನ ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆದಿತ್ತು, ಆದರೆ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BBMP truck bike accident, deceased girl marriage was fixed by family, tragedy. Two employees in a privatre firm were killed when a Bruhat Bengaluru Mahanagara Palike's (BBMP) garbage truck knocked down their bike near KR Circle on Sunday night. The deceased were identified as Prashanth of Banaswadi Biyanugari Shilpa, of Andhra Pradesh.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm