ಬ್ರೇಕಿಂಗ್ ನ್ಯೂಸ್
29-07-24 01:49 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 28: ಮದುವೆ ನಿಶ್ಚಯವಾಗಿದ್ದ ಹೆಣ್ಣು ಮಗಳೊಬ್ಬಳು ನಿನ್ನೆ ಕಸದ ಲಾರಿಯಡಿಗೆ ಸಿಲುಕಿ ದುರಂತವಾಗಿ ಸಾವನ್ನಪ್ಪಿದ ಘಟನೆ ಕೆ.ಆರ್ ಸರ್ಕಲ್ ಬಳಿ ನಡೆದಿದೆ. ಬೆಳಗ್ಗೆ ಮದುವೆ ಬಗ್ಗೆ ಪ್ರಸ್ತಾಪವಾಗಿ ಸಂಜೆ ವೇಳೆಗೆ BBMP ಕಸದ ಲಾರಿಯಡಿಗೆ ಸಿಲುಕಿ ಶಿಲ್ಪ ಎಂಬಾಕೆ ಕೊನೆಯುಸಿರೆಳೆದಿದ್ದಾಳೆ.
ನಿನ್ನೆ ರಾತ್ರಿ 9 ಗಂಟೆಗೆ ಪ್ರಶಾಂತ್ (25) ಮತ್ತು ಶಿಲ್ಪ (25) ಬೈಕ್ನಲ್ಲಿ ಚಲಿಸುತ್ತಿದ್ದ ವೇಳೆ BBMP ಕಸದ ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತರಿಬ್ಬರು ಸ್ನೇಹಿತರಾಗಿದ್ದು, ಐಟಿಪಿಎಲ್ ಟಿಸಿಎಸ್ನಲ್ಲಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಶಿಲ್ಪ ಆಂಧ್ರದ ಇಂದುಪುರ ನಿವಾಸಿ. ನಾಗವಾರದ ಪಿಜಿಯಲ್ಲಿ ವಾಸ ಮಾಡಿಕೊಂಡಿದ್ದಳು. ಈಕೆ ತಂದೆ ವೆಂಕಟರಾಮ ರೆಡ್ಡಿ. ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿದ್ದರು.



ವೆಂಕಟರಾಮ ರೆಡ್ಡಿಗೆ ಒಟ್ಟು ಮೂವರು ಹೆಣ್ಣು ಮಕ್ಕಳು. ಇಬ್ಬರು ಹೆಣ್ಣುಮಕ್ಕಳಿಗೆ ಮದುವೆ ಆಗಿದೆ. ಶಿಲ್ಪ ಕೊನೆಯ ಮಗಳು. ಆಕೆಯ ಮದುವೆ ತಯಾರಿ ಕೂಡ ನಡೀತಿತ್ತು. ಆದರೆ ಅಷ್ಟರಲ್ಲಿ ವಿಧಿಯ ಕ್ರೂರ ಲೀಲೆಗೆ ಬಲಿಯಾಗಿದ್ದಾಳೆ.
ತಂದೆ ವೆಂಕಟರಾಮ ರೆಡ್ಡಿ ಮಗಳ ಮದುವೆಗೆ ಚಿನ್ನವನ್ನು ಮಾಡಿಸಿಟ್ಟಿದ್ದನು. ಭಾನುವಾರ ಬೆಳಗ್ಗೆ ಕೂಡ ಮದುವೆ ಮಾತುಕತೆ ಪ್ರಸ್ತಾಪ ಆಗಿತ್ತು. ಆದರೆ ನಿನ್ನೆ ಸಂಜೆ ಹೊತ್ತಿಗೆ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದಾಳೆ.
ಶಿಲ್ಪ ಮೃತದೇಹ ಬೌರಿಂಗ್ ಆಸ್ಪತ್ರೆ ಶವಾಗಾರದಲ್ಲಿದ್ದು, ಆಕೆಯನ್ನು ಕಾಣಲು ಪೋಷಕರು ಆಗಮಿಸಿದ್ದಾರೆ. ಶವಾಗಾರದ ಬಳಿ ಶಿಲ್ಪ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಿನ್ನೆ ಭಾನುವಾರ ರಜೆ ಹಿನ್ನೆಲೆಯಲ್ಲಿ ಸಂಜೆ ಸ್ನೇಹಿತನ ಜೊತೆ ಊಟಕ್ಕೆ ಎಂದು ಹೋಗಿದ್ದಳು. ರಾತ್ರಿಯ ಊಟ ಮುಗಿಸಿ ಮೆಜೆಸ್ಟಿಕ್ನಿಂದ ಕೆ.ಆರ್.ಸರ್ಕಲ್ ಮಾರ್ಗವಾಗಿ ಬೈಕ್ನಲ್ಲಿ ಬರುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್.ಸರ್ಕಲ್ ಕಡೆ ವೇಗವಾಗಿ ಬಂದ ಕಸದ ಲಾರಿ, ಬೈಕ್ಗೆ ಗುದ್ದಿದೆ. ಅಪಘಾತದ ರಭಸಕ್ಕೆ 10 ಮೀಟರ್ ನಷ್ಟು ದೂರ ಮೃತರ ದೇಹಗಳು ಹೋಗಿ ಬಿದ್ದಿವೆ.
ಪರಿಣಾಮ ರಸ್ತೆ ಮೇಲೆ ರಕ್ತ ಚೆಲ್ಲಿದೆ. ಕೂಡಲೇ ಅಪಘಾತಕ್ಕೊಳಗಾದವರನ್ನ ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆದಿತ್ತು, ಆದರೆ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BBMP truck bike accident, deceased girl marriage was fixed by family, tragedy. Two employees in a privatre firm were killed when a Bruhat Bengaluru Mahanagara Palike's (BBMP) garbage truck knocked down their bike near KR Circle on Sunday night. The deceased were identified as Prashanth of Banaswadi Biyanugari Shilpa, of Andhra Pradesh.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm