ಬ್ರೇಕಿಂಗ್ ನ್ಯೂಸ್
30-07-24 05:45 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 30: ಬೈಕ್ ಗೆ ಡಿಕ್ಕಿ ಹೊಡೆದು ಸವಾರರಿಬ್ಬರ ಸಾವಿಗೆ ಕಾರಣನಾಗಿದ್ದ ಬಿಬಿಎಂಪಿ ಕಸದ ಲಾರಿ ಚಾಲಕನನ್ನು ಬಂಧಿಸಲಾಗಿದೆ. ಅಪಘಾತದ ಬಳಿಕ ಪರಾರಿಯಾಗಿದ್ದ ಚಾಲಕ ಶಿವಶಂಕರ್ (38) ಎಂಬಾತನನ್ನು ಹಲಸೂರು ಗೇಟ್ ಸಂಚಾರಿ ಠಾಣಾ ಪೊಲೀಸರು ಸೆರೆ ಹಿಡಿದಿದ್ದಾರೆ.
ಲಾರಿ ಡಿಕ್ಕಿಯಾಗಿ ಮೈಮೇಲೆ ಹರಿದು ಟಿಸಿಎಸ್ ಕಂಪನಿಯ ಉದ್ಯೋಗಿಗಳಾಗಿದ್ದ ಪ್ರಶಾಂತ್ ಹಾಗೂ ಶಿಲ್ಪಾ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೆ.ಆರ್.ಸರ್ಕಲ್ ಬಳಿ ನಡೆದಿತ್ತು. ಅಪಘಾತದ ಬಳಿಕ ಸ್ಥಳದಿಂದ ಚಾಲಕ ಸ್ಥಳದಿಂದ ಪರಾರಿಯಾಗಿದ್ದ.


ಚಾಲಕ ಪಾನಮತ್ತನಾಗಿ ಲಾರಿ ಚಲಾಯಿಸಿರುವ ಶಂಕೆ ವ್ಯಕ್ತವಾಗಿದ್ದು, ಆತನ ರಕ್ತದ ಮಾದರಿ ಸಂಗ್ರಹಿಸಲಾಗಿದೆ. ವೈದ್ಯಕೀಯ ವರದಿಯ ಬಳಿಕ ಸತ್ಯಾಂಶ ಹೊರಬರಲಿದೆ.
ಕೆಆರ್ ಸರ್ಕಲ್ನಲ್ಲಿ ಭಾನುವಾರ ರಾತ್ರಿ ನಡೆದ ಅಪಘಾತದಲ್ಲಿ ಯುವಕ ಪ್ರಶಾಂತ್ ಮತ್ತು ಯುವತಿ ಶಿಲ್ಪಾ ಸಾವನ್ನಪ್ಪಿದ್ದರು. ಅಪಘಾತದಲ್ಲಿ ಮೃತಪಟ್ಟ ಯುವತಿಯ ಮದುವೆಗೆ ಪೋಷಕರು ಸಿದ್ಧತೆ ನಡೆಸಿದ್ದರು.
ಮೃತ ಶಿಲ್ಪ ಆಂಧ್ರಪ್ರದೇಶದ ಇಂದುಪುರ ನಿವಾಸಿಯಾದ್ದು, ನಾಗವಾರದ ಪಿಜಿಯಲ್ಲಿ ವಾಸವಾಗಿದ್ದರು. ಶಿಲ್ಪ ತಂದೆ ವೆಂಕಟರಾಮ ರೆಡ್ಡಿ ಗಾರೆ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದಾರೆ. ಅವರಿಗೆ ಒಟ್ಟು ಮೂವರು ಹೆಣ್ಣು ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಆಗಿದೆ. ಶಿಲ್ಪ ಕೊನೆಯ ಮಗಳಾಗಿದ್ದು, ಮದುವೆ ತಯಾರಿ ಮಾಡಿಕೊಂಡು, ಅದಕ್ಕಾಗಿ ಚಿನ್ನವನ್ನು ಮಾಡಿಸಿಟ್ಟಿದ್ದರು.
ಕಸದ ಲಾರಿಗಳ ಸ್ಪೀಡ್ ಲಿಮಿಟ್ ಬಗ್ಗೆ ಹೆಣ ಬಿದ್ಮೇಲೆ ಚಿಂತನೆ ;
ಬಿಬಿಎಂಪಿ ಕಸದ ಲಾರಿಗಳಿಂದ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ವೇಗಮಿತಿ ಅಳವಡಿಸಲು ಸಂಚಾರಿ ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ. ಪ್ರಸ್ತುತ ಕಸದ ಲಾರಿಗಳಿಗೆ ಪ್ರತೀ ಗಂಟೆಗೆ 60 ಕಿ.ಮೀ ವೇಗಮಿತಿ ಇದೆ. ಆದಾಗ್ಯೂ ಚಾಲಕರ ನಿರ್ಲಕ್ಷ್ಯ ಹಾಗೂ ಅತಿವೇಗದಿಂದ ಅಪಘಾತಗಳು ಸಂಭವಿಸುತ್ತಿವೆ. ಆದ್ದರಿಂದ ಕಸದ ಲಾರಿಗಳಿಂದ ಸಂಭವಿಸಿರುವ ಅಪಘಾತ ಪ್ರಕರಣಗಳ ವರದಿ ಸಿದ್ಧಪಡಿಸಿ ವೇಗಮಿತಿಯನ್ನು ಮತ್ತಷ್ಟು ತಗ್ಗಿಸಲು ಚಿಂತಿಸಲಾಗುತ್ತಿದೆ. ಅಲ್ಲದೇ ಕಸದ ದುರ್ವಾಸನೆಯ ನಡುವೆ ಕೆಲಸ ಮಾಡಬೇಕಿರುವುದರಿಂದ ಕೆಲವು ಚಾಲಕರು ಪಾನಮತ್ತರಾಗಿ ವಾಹನ ಚಲಾಯಿಸುತ್ತಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿರುವ ಪೊಲೀಸರು ವಿಶೇಷ ಕಾರ್ಯಾಚರಣೆ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
BBMP truck accident in Bangalore, two dead, escaped truck driver arrested by police. The arrested has been identified as Shivashankar. He had flee away from the spot soon after the accident killing two techies.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm