ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.


ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 05:07 pm
HK News Staffer
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm