ಬ್ರೇಕಿಂಗ್ ನ್ಯೂಸ್
31-07-24 09:57 pm HK News Desk ಕರ್ನಾಟಕ
ಹಾಸನ, ಜುಲೈ.31: ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ಸಂಜೆ ಮತ್ತೆ ಗುಡ್ಡ ಕುಸಿತವಾಗಿದ್ದು ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿಕೊಂಡಿದೆ. ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಎರಡು ಕಂಟೇನರ್, ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದು ಅದರ ಚಾಲಕರು ಹೊರಬರಲು ಪರದಾಡಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮೂವರು ಚಾಲಕರನ್ನು ರಕ್ಷಿಸಿದ್ದಾರೆ. ಇದೇ ವೇಳೆ, ಸಕಲೇಶಪುರದ ದೊಡ್ಡತಪ್ಲು ಬಳಿ ರೈಲ್ವೆ ಹಳಿಯ ಮೇಲೂ ಗುಡ್ಡ ಕುಸಿದಿದ್ದು ಪೂರ್ತಿ ಸಂಪರ್ಕ ಕಡಿತಗೊಂಡಿದೆ. ಟ್ಯಾಂಕರ್ ಒಂದು ರಸ್ತೆಯಿಂದ ಪಲ್ಟಿಯಾಗಿದ್ದು ರೈಲು ಹಳಿಯತ್ತ ಬೀಳುವ ಹಂತದಲ್ಲಿ ನಿಂತುಬಿಟ್ಟಿದೆ.


ಈಗಾಗಲೇ ಎಡಕುಮೇರಿ ಬಳಿ ಗುಡ್ಡ ಕುಸಿತದಿಂದ ಸಕಲೇಶಪುರ- ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿದ್ದು ತ್ವರಿತಗತಿಯಲ್ಲಿ ಅಲ್ಲಿ ಕಾಮಗಾರಿ ನಡೆಯುತ್ತಿತ್ತು. ಇದೀಗ ದೊಡ್ಡತಪ್ಲು ಬಳಿ ರೈಲ್ವೇ ಹಳಿಯ ಮೇಲೆ ಮಣ್ಣು ಕುಸಿತಗೊಂಡಿದ್ದು ದುರಸ್ತಿ ಮಾಡಲು ಸಂಕಷ್ಟ ಎದುರಾಗಿದೆ. ಎಡಕುಮೇರಿ ಬಳಿಗೆ ಸಕಲೇಶಪುರದಿಂದಲೇ ಪ್ರತಿನಿತ್ಯ ಕಾರ್ಮಿಕರು ಹಾಗೂ ತಿಂಡಿ, ಊಟ ಇನ್ನಿತರ ಸಾಮಾಗ್ರಿಗಳನ್ನು ಗೂಡ್ಸ್ ರೈಲಿನಲ್ಲಿ ಸಾಗಿಸುತ್ತಿದ್ದರು. ಇದೀಗ ಮಣ್ಣು ಕುಸಿದಿರುವುದರಿಂದ ರಸ್ತೆ ದುರಸ್ತಿಗೆ ತೆರಳುವುದಕ್ಕೂ ಸಕಲೇಶಪುರ ರೈಲು ಮಾರ್ಗದಿಂದ ಸಂಪರ್ಕ ಕಟ್ ಆಗಿದೆ.
Heavy rain in Mangalore cases Landslide again at Shiradi Ghat, two container trucks under soil. The incident took place at Doddataplu in Sakleshpur taluk on Wednesday evening, burying several vehicles under the debris.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am