ಬ್ರೇಕಿಂಗ್ ನ್ಯೂಸ್
01-08-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 1: ಮೂಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತನಿಖೆಯ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿರುವ ಶೋಕಾಸ್ ನೋಟಿಸ್ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು ನೋಟಿಸ್ ಹಿಂಪಡೆಯಬೇಕೆಂದು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯಪಾಲರು ಮುಖ್ಯಮಂತ್ರಿಗೆ ನೀಡಿರುವ ನೋಟಿಸ್ ಅನ್ನು ಹಿಂಪಡೆಯಬೇಕು ಹಾಗೂ ದೂರುದಾರ ಟಿಜೆ ಅಬ್ರಹಾಂ ನೀಡಿರುವ ಅರ್ಜಿಯನ್ನು ತಿರಸ್ಕಾರ ಮಾಡಬೇಕು ಎಂದು ರಾಜ್ಯಪಾಲರಿಗೆ ಒತ್ತಾಯಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, "ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ. 136 ಸ್ಥಾನ ಗೆದ್ದು ಸರ್ಕಾರ ರಚನೆ ಮಾಡಲಾಗಿದೆ. ಕಾನೂನು ಹಾಗೂ ಸಂವಿಧಾನಕ್ಕೆ ನಾವು ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಟಿಜೆ ಅಬ್ರಹಾಂ ಎಂಬ ವ್ಯಕ್ತಿಯ ಮೂಲಕ ದೂರು ಕೊಡಿಸಲಾಗಿದೆ. ಜುಲೈ 26ರಂದು ಸಿದ್ದರಾಮಯ್ಯ ವಿರುದ್ಧ ಅಬ್ರಹಾಂ ದೂರು ನೀಡುತ್ತಾರೆ. ಇದೇ ವೇಳೆ ಜುಲೈ 5 ರಂದು ಮೂಡಾದಲ್ಲಿ ಹಗರಣ ಆಗಿದೆ ಎಂದು ರಾಜ್ಯಪಾಲರಿಂದ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.
ಜುಲೈ 15ರಂದು ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಮೂಡಾದಲ್ಲಿ ಅಕ್ರಮವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರು. ಆದರೆ, ಟಿಜೆ ಅಬ್ರಹಾಂ ದೂರು ಕೊಟ್ಟ ದಿನದಂದೇ ಗವರ್ನರ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಅಲ್ಲದೆ, 7 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಈ ರೀತಿಯ ನಡೆಯನ್ನು ನಾವು ವಿರೋಧಿಸುತ್ತೇವೆ ಎಂದು ಆಕ್ಷೇಪಿಸಿದರು. ಈಗಾಗಲೇ ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಯುತ್ತಿದೆ. ಹಾಗಿದ್ದರೂ ಇಷ್ಟು ತರಾತುರಿಯಲ್ಲಿ ಶೋಕಾಸ್ ನೋಟಿಸ್ ಕೊಡುತ್ತಾರೆ ಎಂದರೆ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.
In a major political development, Governor Thaawarchand Gehlot is learnt to have issued a “showcause notice” to Chief Minister Siddaramaiah seeking more explanation from him on the alleged irregularities in allotment of sites by the Mysuru Urban Development Authority (MUDA) to his wife.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am