ಬ್ರೇಕಿಂಗ್ ನ್ಯೂಸ್
01-08-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 1: ಮೂಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತನಿಖೆಯ ಬಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿರುವ ಶೋಕಾಸ್ ನೋಟಿಸ್ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಿಎಂ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು ನೋಟಿಸ್ ಹಿಂಪಡೆಯಬೇಕೆಂದು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.
ರಾಜ್ಯಪಾಲರು ಮುಖ್ಯಮಂತ್ರಿಗೆ ನೀಡಿರುವ ನೋಟಿಸ್ ಅನ್ನು ಹಿಂಪಡೆಯಬೇಕು ಹಾಗೂ ದೂರುದಾರ ಟಿಜೆ ಅಬ್ರಹಾಂ ನೀಡಿರುವ ಅರ್ಜಿಯನ್ನು ತಿರಸ್ಕಾರ ಮಾಡಬೇಕು ಎಂದು ರಾಜ್ಯಪಾಲರಿಗೆ ಒತ್ತಾಯಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, "ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ. 136 ಸ್ಥಾನ ಗೆದ್ದು ಸರ್ಕಾರ ರಚನೆ ಮಾಡಲಾಗಿದೆ. ಕಾನೂನು ಹಾಗೂ ಸಂವಿಧಾನಕ್ಕೆ ನಾವು ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಟಿಜೆ ಅಬ್ರಹಾಂ ಎಂಬ ವ್ಯಕ್ತಿಯ ಮೂಲಕ ದೂರು ಕೊಡಿಸಲಾಗಿದೆ. ಜುಲೈ 26ರಂದು ಸಿದ್ದರಾಮಯ್ಯ ವಿರುದ್ಧ ಅಬ್ರಹಾಂ ದೂರು ನೀಡುತ್ತಾರೆ. ಇದೇ ವೇಳೆ ಜುಲೈ 5 ರಂದು ಮೂಡಾದಲ್ಲಿ ಹಗರಣ ಆಗಿದೆ ಎಂದು ರಾಜ್ಯಪಾಲರಿಂದ ನೋಟಿಸ್ ಕೊಡಲಾಗಿದೆ ಎಂದು ಹೇಳಿದರು.
ಜುಲೈ 15ರಂದು ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಮೂಡಾದಲ್ಲಿ ಅಕ್ರಮವಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರು. ಆದರೆ, ಟಿಜೆ ಅಬ್ರಹಾಂ ದೂರು ಕೊಟ್ಟ ದಿನದಂದೇ ಗವರ್ನರ್ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಅಲ್ಲದೆ, 7 ದಿನಗಳ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಈ ರೀತಿಯ ನಡೆಯನ್ನು ನಾವು ವಿರೋಧಿಸುತ್ತೇವೆ ಎಂದು ಆಕ್ಷೇಪಿಸಿದರು. ಈಗಾಗಲೇ ಪ್ರಕರಣದಲ್ಲಿ ನ್ಯಾಯಾಂಗ ತನಿಖೆ ನಡೆಯುತ್ತಿದೆ. ಹಾಗಿದ್ದರೂ ಇಷ್ಟು ತರಾತುರಿಯಲ್ಲಿ ಶೋಕಾಸ್ ನೋಟಿಸ್ ಕೊಡುತ್ತಾರೆ ಎಂದರೆ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ ಎಂದು ವಾಗ್ದಾಳಿ ನಡೆಸಿದರು.
In a major political development, Governor Thaawarchand Gehlot is learnt to have issued a “showcause notice” to Chief Minister Siddaramaiah seeking more explanation from him on the alleged irregularities in allotment of sites by the Mysuru Urban Development Authority (MUDA) to his wife.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm