ಬ್ರೇಕಿಂಗ್ ನ್ಯೂಸ್
03-08-24 06:48 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.3: ಕೇರಳದ ವಯನಾಡು ಭೂಕುಸಿತ ಬಳಿಕ ಎಚ್ಚೆತ್ತುಕೊಂಡಿರುವ ಕೇಂದ್ರ ಸರಕಾರ, ಪಶ್ಚಿಮ ಘಟ್ಟದ 57 ಸಾವಿರ ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿದೆ.
ಜುಲೈ 31 ರಂದು ಈ ಸಂಬಂಧ ಕರಡು ಅಧಿಸೂಚನೆ ಹೊರಡಿಸಿದ್ದು ಇದು ಕಳೆದ ಒಂದು ದಶಕದಲ್ಲಿ ಹೊರಡಿಸುತ್ತಿರುವ 6ನೇ ಕರಡು ಅಧಿಸೂಚನೆಯಾಗಿದೆ. ಇದರಲ್ಲಿ ಪಶ್ಚಿಮಘಟ್ಟದ ಶೇ. 36ರಷ್ಟು ಪ್ರದೇಶ ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಿದೆ. ಭೂಕುಸಿತ ಸಂಭವಿಸಿರುವ ಕೇರಳದ ವಯನಾಡು ಜಿಲ್ಲೆಯ 13 ಹಳ್ಳಿಗಳನ್ನು ಒಳಗೊಂಡಂತೆ ರಾಜ್ಯ ವ್ಯಾಪ್ತಿಯ 10 ಸಾವಿರ ಚದರ ಕಿಮೀ ಪಶ್ಚಿಮಘಟ್ಟ ಪ್ರದೇಶ ಪರಿಸರ ಸೂಕ್ಷ್ಮ ವಲಯದಲ್ಲಿದೆ ಎಂದು ಕರಡು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕದ 20,668 ಚದರ ಕಿ.ಮೀ. ಪ್ರದೇಶವನ್ನು “ಪರಿಸರ ಸೂಕ್ಷ್ಮ ವಲಯ’ (ಇಎಸ್ಎ) ಎಂದು ಘೋಷಿಸಲಾಗಿದೆ.

ಇತ್ತೀಚೆಗಷ್ಟೇ ಭೀಕರ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನ 13 ಹಳ್ಳಿಗಳು ಹಾಗೂ 6 ರಾಜ್ಯಗಳ ಘಟ್ಟ ಪ್ರದೇಶಗಳು ಅಧಿಸೂಚನೆಯಲ್ಲಿ ಸೇರಿವೆ. ಈ ಅಧಿಸೂಚನೆ ಹೊರಡಿಸಿದ 60 ದಿನಗಳ ಒಳಗಾಗಿ ಸಲಹೆಗಳು ಮತ್ತು ತಕರಾರುಗಳನ್ನು ಸಲ್ಲಿಸಬಹುದಾಗಿದೆ. ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದ ಬೆನ್ನಲ್ಲೇ ಕೇಂದ್ರ ಸರಕಾರ ಜು.31ರಂದು ಈ ಅಧಿಸೂಚನೆ ಹೊರಡಿಸಿದೆ.
ಪರಿಸರ ಸೂಕ್ಷ್ಮ ವಲಯದಲ್ಲಿ ಕಲ್ಲು ಕೋರೆ, ಗಣಿಗಾರಿಕೆ, ಮರಳುಗಾರಿಕೆ ಪೂರ್ಣ ನಿಷೇಧ ಇರಲಿದೆ. ಈಗಾಗಲೇ ಇರುವ ಗಣಿಗಾರಿಕೆ 5 ವರ್ಷಗಳಲ್ಲಿ ಸ್ಥಗಿತವಾಗಬೇಕು. ಹೊಸ ಉಷ್ಣ ಸ್ಥಾವರ ನಿರ್ಮಾಣ ಇಲ್ಲ. ಈಗಿರುವ ಉಷ್ಣ ಸ್ಥಾವರಗಳಿಗೆ ಅಡ್ಡಿ ಇಲ್ಲ, ಆದರೆ ವಿಸ್ತರಣೆ ಮಾಡುವಂತಿಲ್ಲ. ಬೃಹತ್ ನಿರ್ಮಾಣ ಯೋಜನೆ, ಟೌನ್ಶಿಪ್ ನಿಷೇಧ. ಹಾಲಿ ನಿರ್ಮಾಣಗಳ ದುರಸ್ತಿ, ನವೀಕರಣಕ್ಕೆ ಅಡ್ಡಿ ಇಲ್ಲ ಎನ್ನಲಾಗುತ್ತಿದೆ.
The government has issued a draft notification to declare over 56,800 square kilometres of the Western Ghats across six states, including 13 villages in Kerala’s landslide-hit Wayanad, Ecologically Sensitive Area (ESA). The development comes amid massive landslides wreaking havoc in Wayanad, leading to the deaths of over 300 people.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm