ಬ್ರೇಕಿಂಗ್ ನ್ಯೂಸ್
03-08-24 06:48 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.3: ಕೇರಳದ ವಯನಾಡು ಭೂಕುಸಿತ ಬಳಿಕ ಎಚ್ಚೆತ್ತುಕೊಂಡಿರುವ ಕೇಂದ್ರ ಸರಕಾರ, ಪಶ್ಚಿಮ ಘಟ್ಟದ 57 ಸಾವಿರ ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿದೆ.
ಜುಲೈ 31 ರಂದು ಈ ಸಂಬಂಧ ಕರಡು ಅಧಿಸೂಚನೆ ಹೊರಡಿಸಿದ್ದು ಇದು ಕಳೆದ ಒಂದು ದಶಕದಲ್ಲಿ ಹೊರಡಿಸುತ್ತಿರುವ 6ನೇ ಕರಡು ಅಧಿಸೂಚನೆಯಾಗಿದೆ. ಇದರಲ್ಲಿ ಪಶ್ಚಿಮಘಟ್ಟದ ಶೇ. 36ರಷ್ಟು ಪ್ರದೇಶ ಪರಿಸರ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡಿದೆ. ಭೂಕುಸಿತ ಸಂಭವಿಸಿರುವ ಕೇರಳದ ವಯನಾಡು ಜಿಲ್ಲೆಯ 13 ಹಳ್ಳಿಗಳನ್ನು ಒಳಗೊಂಡಂತೆ ರಾಜ್ಯ ವ್ಯಾಪ್ತಿಯ 10 ಸಾವಿರ ಚದರ ಕಿಮೀ ಪಶ್ಚಿಮಘಟ್ಟ ಪ್ರದೇಶ ಪರಿಸರ ಸೂಕ್ಷ್ಮ ವಲಯದಲ್ಲಿದೆ ಎಂದು ಕರಡು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕದ 20,668 ಚದರ ಕಿ.ಮೀ. ಪ್ರದೇಶವನ್ನು “ಪರಿಸರ ಸೂಕ್ಷ್ಮ ವಲಯ’ (ಇಎಸ್ಎ) ಎಂದು ಘೋಷಿಸಲಾಗಿದೆ.

ಇತ್ತೀಚೆಗಷ್ಟೇ ಭೀಕರ ಭೂಕುಸಿತಕ್ಕೆ ತುತ್ತಾಗಿರುವ ಕೇರಳದ ವಯನಾಡಿನ 13 ಹಳ್ಳಿಗಳು ಹಾಗೂ 6 ರಾಜ್ಯಗಳ ಘಟ್ಟ ಪ್ರದೇಶಗಳು ಅಧಿಸೂಚನೆಯಲ್ಲಿ ಸೇರಿವೆ. ಈ ಅಧಿಸೂಚನೆ ಹೊರಡಿಸಿದ 60 ದಿನಗಳ ಒಳಗಾಗಿ ಸಲಹೆಗಳು ಮತ್ತು ತಕರಾರುಗಳನ್ನು ಸಲ್ಲಿಸಬಹುದಾಗಿದೆ. ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದ ಬೆನ್ನಲ್ಲೇ ಕೇಂದ್ರ ಸರಕಾರ ಜು.31ರಂದು ಈ ಅಧಿಸೂಚನೆ ಹೊರಡಿಸಿದೆ.
ಪರಿಸರ ಸೂಕ್ಷ್ಮ ವಲಯದಲ್ಲಿ ಕಲ್ಲು ಕೋರೆ, ಗಣಿಗಾರಿಕೆ, ಮರಳುಗಾರಿಕೆ ಪೂರ್ಣ ನಿಷೇಧ ಇರಲಿದೆ. ಈಗಾಗಲೇ ಇರುವ ಗಣಿಗಾರಿಕೆ 5 ವರ್ಷಗಳಲ್ಲಿ ಸ್ಥಗಿತವಾಗಬೇಕು. ಹೊಸ ಉಷ್ಣ ಸ್ಥಾವರ ನಿರ್ಮಾಣ ಇಲ್ಲ. ಈಗಿರುವ ಉಷ್ಣ ಸ್ಥಾವರಗಳಿಗೆ ಅಡ್ಡಿ ಇಲ್ಲ, ಆದರೆ ವಿಸ್ತರಣೆ ಮಾಡುವಂತಿಲ್ಲ. ಬೃಹತ್ ನಿರ್ಮಾಣ ಯೋಜನೆ, ಟೌನ್ಶಿಪ್ ನಿಷೇಧ. ಹಾಲಿ ನಿರ್ಮಾಣಗಳ ದುರಸ್ತಿ, ನವೀಕರಣಕ್ಕೆ ಅಡ್ಡಿ ಇಲ್ಲ ಎನ್ನಲಾಗುತ್ತಿದೆ.
The government has issued a draft notification to declare over 56,800 square kilometres of the Western Ghats across six states, including 13 villages in Kerala’s landslide-hit Wayanad, Ecologically Sensitive Area (ESA). The development comes amid massive landslides wreaking havoc in Wayanad, leading to the deaths of over 300 people.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am