ಬ್ರೇಕಿಂಗ್ ನ್ಯೂಸ್
05-08-24 02:39 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.5: ಬೆಂಗಳೂರು ನಗರದಲ್ಲಿ ಟ್ರಾಫಿಕ್ ದಟ್ಟಣೆ ನಿಯಂತ್ರಣಕ್ಕೆ ಪೊಲೀಸ್ ಇಲಾಖೆಯಿಂದ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಂತೆ, ಬೆಂಗಳೂರು ನಗರದಾದ್ಯಂತ ಪ್ರತಿ ಶನಿವಾರ ಮತ್ತು ಇತರೇ ದಿನಗಳಲ್ಲಿ ಬೆಳಗ್ಗೆ, ಸಂಜೆ ಎಲ್ಲ ರೀತಿಯ ಘನ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.
ವೀಕೆಂಡಲ್ಲಿ ಟ್ರಾಫಿಕ್ ಹೆಚ್ಚಿರುವುದರಿಂದ ಪ್ರತಿ ಶನಿವಾರಗಳಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2.30 ಮತ್ತು ಸಂಜೆ 4.30 ರಿಂದ ರಾತ್ರಿ 9ರ ವರೆಗೆ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಇತರ ದಿನಗಳಲ್ಲಿ ಬೆಳಗ್ಗೆ 7 ರಿಂದ ಪೂರ್ವಾಹ್ನ 11ರ ವರೆಗೆ ಮತ್ತು ಸಂಜೆ 4 ರಿಂದ ರಾತ್ರಿ 10ರ ವರೆಗಿನ ನಿರ್ಬಂಧವಿದ್ದು ಅದು ಮುಂದುವರಿಯಲಿದೆ.
ವಾರಾಂತ್ಯ ದಿನಗಳಲ್ಲಿ ಹೆಚ್ಚಿನ ದಟ್ಟಣೆ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ರ ನಡುವೆ ಇರುತ್ತದೆ. ಶನಿವಾರ ಮಧ್ಯಾಹ್ನ 1 ಗಂಟೆಯಷ್ಟೊತ್ತಿಗೆ ಸಂಚಾರ ದಟ್ಟಣೆ ತೀವ್ರಗೊಳ್ಳುತ್ತದೆ. ಪೀಕ್ ಅವರ್ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2:30ರ ವರೆಗೆ ಮತ್ತು ಸಂಜೆ 5 ರಿಂದ ರಾತ್ರಿ 8:30ರ ವರೆಗೆ ಇರುತ್ತದೆ. ಹಾಗಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಘನ ವಾಹನಗಳ ನಿರ್ಬಂಧವು ವಾರಾಂತ್ಯದಲ್ಲಿ ನಗರ ಎದುರಿಸುವ ತೀವ್ರ ಟ್ರಾಫಿಕ್ ದಟ್ಟಣೆಯನ್ನು ಪರಿಹರಿಸುವ ಉದ್ದೇಶ ಹೊಂದಿದೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ಸಂಚಾರ ಸುಗಮವಾಗಲಿದೆ ಎಂದು ತಿಳಿಸಿದ್ದಾರೆ.
Bengaluru Traffic Police is taking many measures to control traffic in the city. Communicating traffic rules to motorists and pedestrians. Also implementing new initiatives. Now they have made some changes in the traffic time of heavy goods vehicle within the city.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm