ಬ್ರೇಕಿಂಗ್ ನ್ಯೂಸ್
06-08-24 06:40 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.6: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮಂಗಳವಾರ ಮತ್ತೊಂದು ದೂರು ದಾಖಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ದಾಖಲೆ ಸಮೇತ ದೂರು ದಾಖಲಾಗಿದ್ದು, ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಲು ಕೋರಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
1979ರಲ್ಲಿ ಮೈಸೂರು ತಾಲೂಕು ವರುಣಾದ ಉತ್ತನಹಳ್ಳಿಯಲ್ಲಿ ಆಶ್ರಯ ಮನೆಗಳಿಗಾಗಿ ಭೂಸ್ವಾಧೀನ ಮಾಡಿದ್ದ ಜಮೀನಿಗೆ 30 ವರ್ಷದ ಬಳಿಕ ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಮರಪ್ಪ ಎಂಬವರ ಹೆಸರಿಗೆ 1.39 ಎಕರೆ ಜಮೀನು ಡಿನೋಟಿಫೈ ಮಾಡುವಂತೆ ಸಿದ್ದರಾಮಯ್ಯ ಶಿಫಾರಸು ಮಾಡಿದ್ದರು. ಮರಪ್ಪ ಎಂಬವರಿಗೆ ಸಂಬಂಧವೇ ಇರದಿದ್ದರೂ ನಕಲಿ ದಾಖಲೆ ಆಧರಿಸಿ ಮರಪ್ಪ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ ಎಂದು ಮೈಸೂರಿನವರೇ ಆದ ದೂರುದಾರ ಸ್ನೇಹಮಯಿ ದೂರಿನಲ್ಲಿ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಪತ್ರ ಆಧರಿಸಿ 14 ತಿಂಗಳ ಬಳಿಕ 1.39 ಎಕರೆಯನ್ನು ಅಂದಿನ ಮೈಸೂರು ಡಿಸಿ ಡಿನೋಟಿಫೈ ಮಾಡಿದ್ದರು. ಆದರೆ, ಡಿಸಿ ಆದೇಶ ಪ್ರಶ್ನಿಸಿ ಫಲಾನುಭವಿಗಳು ಮರು ದೂರು ಸಲ್ಲಿಸಿದ್ದರು. ಮೂಲ ಜಮೀನಿನ ಮಾಲೀಕರು ಮರಪ್ಪ ಅಲ್ಲ, ಆದರೂ ಅವರ ಹೆಸರಿಗೆ ಡಿನೋಟಿಫೈ ಮಾಡಲಾಗಿದೆ. ಡಿನೋಟಿಫೈ ಪ್ರಕ್ರಿಯೆಯಲ್ಲಿ ಸಿದ್ದರಾಮಯ್ಯ ಭಾಗಿಯಾದ ಹಿನ್ನೆಲೆ ಸಿಎಂ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ದೂರಿನಲ್ಲಿ ಮನವಿ ಮಾಡಿದ್ದಾರೆ.
ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ಬೃಹತ್ ಮೈಸೂರು ಚಲೋ ಪಾದಯಾತ್ರೆಯು ಮದ್ದೂರು ತಲುಪಿತು. ಬಿಜೆಪಿ ಸಹಸ್ರಾರು ಸಂಖ್ಯೆಯಲ್ಲಿ ತೆರಳುತ್ತಿರುವ ನಮ್ಮ ಯಾತ್ರೆಯನ್ನು ಸ್ವಾಗತಿಸಿದ ಸಾರ್ವಜನಿಕ ಬಂಧುಗಳ ಬೆಂಬಲ ದುರಾಡಳಿತ ಅಂತ್ಯಗೊಳಿಸುವ ಸಂಕಲ್ಪಕ್ಕೆ ಸಾಕ್ಷಿಯಾಯಿತು.#MysuruChalo #BJPJDSPadayatre #ScamSarkara #ಮೈಸೂರುಚಲೋ… pic.twitter.com/0YknU4iX8C
— Vijayendra Yediyurappa (@BYVijayendra) August 6, 2024
Another complaint has been filed against Karnataka Chief Minister Siddaramaiah in the office of Governor Thaawarchand Gehlot in connection with the de-notification of a land case. RTI activist Snehamayi Krishna has filed the complaint through a registered post.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm