ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm