ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm