ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm