ಬ್ರೇಕಿಂಗ್ ನ್ಯೂಸ್
08-08-24 11:20 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 8: ತೀರ್ಥಹಳ್ಳಿಯಲ್ಲಿ ಅಕ್ರಮ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್ಎಫ್ಒ) ಲೋಕೇಶ್ ಅವರನ್ನು ಎರಡೇ ದಿನಗಳಲ್ಲಿ ವರ್ಗಾವಣೆ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ತುಂಗಾ ನದಿ ದಡದಲ್ಲಿ ವಿಹಂಗಮ ಹಾಲಿಡೇ ರೆಸಾರ್ಟ್ ಬಫರ್ ಝೋನ್ ಒಳಗೆ ಕಾರ್ಯಾಚರಿಸುತ್ತಿದ್ದು, ಕೃಷಿ ಚಟುವಟಿಕೆ, ರೆಸಾರ್ಟ್ ಜೊತೆಗೆ ವಾಣಿಜ್ಯ ಚಟುವಟಿಕೆಗಳೂ ನಡೆಯುತ್ತಿವೆ. ಇದಕ್ಕೆ ಅನುಮತಿ ನೀಡಿದವರು ಯಾರೆಂದು ಹೋರಾಟಗಾರ ಎಚ್.ಎಂ ವೆಂಕಟೇಶ್ ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಶಿವಮೊಗ್ಗ ಜಿಲ್ಲಾಡಳಿತವನ್ನು ಪ್ರಶ್ನಿಸಿ, ಪತ್ರ ಬರೆದಿದ್ದರು.
ಜಿಲ್ಲಾಡಳಿತದಿಂದ ಪತ್ರ ಬಂದಿದ್ದರಿಂದ ತೀರ್ಥಹಳ್ಳಿ ವಲಯ ಅರಣ್ಯಾಧಿಕಾರಿ ಡಾ.ಲೋಕೇಶ್ ಸ್ಥಳಕ್ಕೆ ತೆರಳಿ, ಅರಣ್ಯ ಪ್ರದೇಶ ಒತ್ತುವರಿ ಮಾಡಿ ರೆಸಾರ್ಟ್ ನೆಪದಲ್ಲಿ ಅರಣ್ಯ ಕಾಯ್ದೆ ಉಲ್ಲಂಘಿಸಿದ್ದಾರೆ. ಅದನ್ನು ಕೂಡಲೇ ತೆರವುಗೊಳಿಸಲು ವರದಿ ನೀಡಿದ್ದರು. ವರದಿ ನೀಡಿದ ಎರಡೇ ದಿನದಲ್ಲಿ ಡಾ. ಲೋಕೇಶ್ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಅವರು ತೀರ್ಥಹಳ್ಳಿಗೆ ಬಂದು, ಕೇವಲ ಒಂದು ವರ್ಷ 9 ತಿಂಗಳು ಮಾತ್ರ ಆಗಿದ್ದು, 2 ವರ್ಷ ಪೂರ್ಣ ಆಗಿಲ್ಲ. ಅದಕ್ಕೂ ಮೊದಲೇ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಈ ವರ್ಗಾವಣೆಗೆ ತಡೆ ನೀಡುವಂತೆ ಲೋಕೇಶ್ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ವಿಹಂಗಮ ರೆಸಾರ್ಟ್ ವಿರುದ್ಧ ಬಂದಿದ್ದ ದೂರನ್ನು ಆಧರಿಸಿ, ವರದಿ ನೀಡಿದ್ದೇನೆ. ಎಫ್ ಐ ಆರ್ ಮಾಡಿ ಕ್ರಮ ಜರುಗಿಸಲು ತಿಳಿಸಿದ್ದೇನೆ. ವರದಿ ಕೊಟ್ಟ ಮಾರನೇ ದಿನಕ್ಕೆ ವರ್ಗಾವಣೆ ಆದೇಶ ಬಂದಿದೆ. ಹಾಗಾಗಿ, ನನ್ನ ಮೇಲೆ ವರ್ಗಾವಣೆ ಅಸ್ತ್ರ ಪ್ರಯೋಗ ಆಗಿರಬಹುದು ಎಂದು ಡಾ.ಲೋಕೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
Shivamogga forest officer transferred for vacating resort in forest area in Shivamogga
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 06:26 pm
HK News Desk
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am