ಬ್ರೇಕಿಂಗ್ ನ್ಯೂಸ್
10-08-24 09:12 pm HK News Desk ಕರ್ನಾಟಕ
ಮೈಸೂರು, ಆ 10: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.
ನಿಮ್ಮ ಸರ್ಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತನಾಡುತ್ತೀರಾ. ವಿಜಯೇಂದ್ರ, ಅಶೋಕಾ ಅಂತೀರಾ. ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಎಂದು ಕೇಳುತ್ತಿರುವ ಸಿದ್ದರಾಮಯ್ಯ ಅವರೇ, ಯಾರಪ್ಪನ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು? ಎಂದು ಬಿಎಸ್ವೈ ಪ್ರಶ್ನಿಸಿದರು.
ಸಿಎಂ ಹಾಗೂ ಡಿಸಿಎಂ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ಇದು ಹಗಲು ದರೋಡೆಯ ಭ್ರಷ್ಟ ಸರ್ಕಾರ. ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ ಮೈತ್ರಿಗೆ 130 ಸ್ಥಾನ ಬರುತ್ತವೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.
“I may be 82, but I still have the strength to tour across the State and fight to ensure your exit as the Chief Minister,” said veteran BJP leader B.S. Yediyurappa on Saturday while attacking Chief Minister Siddaramaiah over his recent remarks against him.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm