ಬ್ರೇಕಿಂಗ್ ನ್ಯೂಸ್
10-08-24 09:12 pm HK News Desk ಕರ್ನಾಟಕ
ಮೈಸೂರು, ಆ 10: ನನಗೀಗ 82 ವರ್ಷ ವಯಸ್ಸಾಗಿದೆ, ಇನ್ನೂ ಕೈ-ಕಾಲು ಗಟ್ಟಿ ಇವೆ. ರಾಜ್ಯದ ಉದ್ದಗಲಕ್ಕೂ ಓಡಾಡಿ ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಮನೆ ಸೇರಲ್ಲ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಕೊನೆ ಉಸಿರು ಇರುವವರೆಗೂ ರಾಜಕೀಯ ಮಾಡ್ತೀನಿ. ನಿಮಗೆ ತಾಕತ್ ಇದೆಯಾ, ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸುತ್ತೀರಾ ಎಂದು ಗುಡುಗಿದರು.
ನಿಮ್ಮ ಸರ್ಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತನಾಡುತ್ತೀರಾ. ವಿಜಯೇಂದ್ರ, ಅಶೋಕಾ ಅಂತೀರಾ. ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಎಂದು ಕೇಳುತ್ತಿರುವ ಸಿದ್ದರಾಮಯ್ಯ ಅವರೇ, ಯಾರಪ್ಪನ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು? ಎಂದು ಬಿಎಸ್ವೈ ಪ್ರಶ್ನಿಸಿದರು.
ಸಿಎಂ ಹಾಗೂ ಡಿಸಿಎಂ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ಇದು ಹಗಲು ದರೋಡೆಯ ಭ್ರಷ್ಟ ಸರ್ಕಾರ. ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ ಮೈತ್ರಿಗೆ 130 ಸ್ಥಾನ ಬರುತ್ತವೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ಯಡಿಯೂರಪ್ಪ ಆಗ್ರಹಿಸಿದರು.
“I may be 82, but I still have the strength to tour across the State and fight to ensure your exit as the Chief Minister,” said veteran BJP leader B.S. Yediyurappa on Saturday while attacking Chief Minister Siddaramaiah over his recent remarks against him.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm