ಬ್ರೇಕಿಂಗ್ ನ್ಯೂಸ್
11-08-24 10:10 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.11: ಬೆಂಗಳೂರಿನ ಅಗತ್ಯಕ್ಕೆ ಬೇಕಾದಷ್ಟು ನೀರು ಬೆಂಗಳೂರಿನ ಒಳಗಡೆಯೇ ಲಭ್ಯವಿದ್ದು, ಲಿಂಗನಮಕ್ಕಿಯಿಂದ, ಮೇಕೆದಾಟಿನಿಂದ ನಗರಕ್ಕೆ ನೀರು ಪೂರೈಸುವ ಯೋಜನೆಗಳನ್ನು ಕೈ ಬಿಡಬೇಕು ಎಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ವಿಜ್ಞಾನಿ ಟಿ.ವಿ.ರಾಮಚಂದ್ರ ಸಲಹೆ ನೀಡಿದ್ದಾರೆ.
ಗಾಂಧಿ ಭವನದಲ್ಲಿ 'ಪರಿಸರಕ್ಕಾಗಿ ನಾವು' ಸಂಘಟನೆಯು ಮಾಧವ ಗಾಡ್ಗೀಳ್ ವರದಿ ಅನುಷ್ಠಾನದ ಬಗ್ಗೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ವಾರ್ಷಿಕವಾಗಿ 750 ರಿಂದ 800 ಮಿಲಿ ಮೀಟರ್ ಮಳೆಯಾಗುತ್ತದೆ. ಇದರರ್ಥ 15 ಟಿಎಂಸಿ ನೀರನ್ನು ನಾವು ಮಳೆ ನೀರು ಕೊಯ್ಲು ಪದ್ಧತಿ ಮೂಲಕ ಸಂಗ್ರಹಿಸಬಹುದು. ಹಾಗೆಯೇ 16 ಟಿಎಂಸಿಯಷ್ಟು ನೀರು ಇಲ್ಲಿ ಕೆರೆ, ಅಂತರ್ಜಲಗಳಲ್ಲಿದ್ದು, ಒಟ್ಟು 31 ಟಿಎಂಸಿ ನೀರು ನಗರದೊಳಗೆ ಲಭ್ಯವಿದೆ. ಬೆಂಗಳೂರಿಗೆ ಬಳಕೆಗೆ ಬೇಕಾಗಿರುವ ನೀರು 18 ಟಿಎಂಸಿ ಮಾತ್ರ. ತನ್ಮೂಲಕ ನಗರದ ಬಳಕೆಗೆ ಅಗತ್ಯ ಪ್ರಮಾಣದ ನೀರು ನಗರದೊಳಗೆಯೇ ಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು.
ನೀರಿನ ಮರು ಬಳಕೆಯಿಂದ ಜಲ ಮೂಲಗಳ ಮೇಲಿನ ಒತ್ತಡ ಕಡಿಮೆ ಮಾಡಬಹುದು. ನಗರದಲ್ಲಿರುವ ಕೆರೆಗಳ ಪುನರುಜ್ಜೀವನ ಕ್ರಮಗಳ ಮೂಲಕ ಅನ್ಯ ಊರಿನ ನೀರಿನ ಮೇಲಿನ ಅವಲಂಬನೆ ಕಡಿಮೆ ಮಾಡಬಹುದು. ಜಕ್ಕೂರು ಕೆರೆಯ ಅಭಿವೃದ್ಧಿಯ ಮಾದರಿ ನಮ್ಮ ಮುಂದಿದೆ. ಜಕ್ಕೂರು ಕೆರೆಯ ಹೂಳನ್ನು ತೆಗೆದು ಏನು ಮಾಡುವುದು ಎಂಬುದು ನಮ್ಮ ದೊಡ್ಡ ತಲೆ ನೋವಾಗಿತ್ತು. ನಾವು ಪಕ್ಕದ ರೈತರ ಮನವೊಲಿಸಿ ಸುಮಾರು 400 ಎಕರೆ ಕೃಷಿ ಭೂಮಿಗೆ ಹೂಳನ್ನು ಹಾಕಿದೆವು. ಇಂದು ಆ ರೈತರಿಗೆ ಉತ್ತಮ ಫಸಲು ಬರುತ್ತಿದೆ. ಜಕ್ಕೂರು ಕೆರೆಯ ಸುತ್ತಮುತ್ತಲಿರುವ ಬಾವಿಗಳಲ್ಲಿ ಉತ್ತಮ ಮಟ್ಟದಲ್ಲಿ ನೀರು ಲಭ್ಯವಿದೆ ಎಂದು ಹೇಳಿದರು.
ಬೆಳ್ಳಂದೂರು ಕೆರೆಯ ಶುದ್ಧೀಕರಣ ಪ್ರಯತ್ನ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಬೆಳ್ಳಂದೂರು ಮತ್ತು ವರ್ತೂರು ಕೆರೆಯ ನೀರನ್ನು ಜನ ಬಳಕೆಗೆ ಬಳಸುವುದರಿಂದ ಕಾವೇರಿ ನೀರಿನ ಮೇಲಿನ ನಮ್ಮ ಅವಲಂಬನೆ ಕಡಿಮೆ ಮಾಡಬಹುದು. ಅದೇ ರೀತಿ ಪ್ರತಿ ವಾರ್ಡ್ನಲ್ಲಿಯೂ ಕಿರು ಅರಣ್ಯ ಬೆಳೆಸಬೇಕು. ಯುವ ಜನರಲ್ಲಿ ಪರಿಸರ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಟಿ.ವಿ.ರಾಮಚಂದ್ರ ಸಲಹೆ ನೀಡಿದರು.
ಇನ್ನು ಮೇಕೆದಾಟು ಯೋಜನೆಗೆ 5,000 ಹೆಕ್ಟೇರ್ ಅರಣ್ಯ ಪ್ರದೇಶ ನಾಶವಾಗಲಿದೆ. ಇಷ್ಟೊಂದು ದೊಡ್ಡ ಪ್ರಮಾಣದ ಅರಣ್ಯಕ್ಕೆ 100 ಟಿಎಂಸಿ ನೀರನ್ನು ಸಂಗ್ರಹಿಸಿಡುವ ಸಾಮರ್ಥ್ಯವಿದೆ. 100 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಇರುವ ಕಾಡು ನಾಶ ಮಾಡಿ ಸಿಮೆಂಟ್ ಕಟ್ಟೆ (ಡ್ಯಾಂ) ಕಟ್ಟಿ 45 ಟಿಎಂಸಿ ನೀರು ಸಂಗ್ರಹಿಸುತ್ತೇವೆ ಎಂಬುದರಲ್ಲಿ ಅರ್ಥವಿದೆಯೇ ಎಂದು ಅವರು ಪ್ರಶ್ನಿಸಿದರು. ಹಾಗೆಯೇ ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ತರುವ ಪ್ರಯತ್ನವನ್ನು ನಾನು ನನ್ನ ಕೊನೆಯ ಉಸಿರು ಇರುವವರೆಗೂ ವಿರೋಧಿಸುತ್ತೇನೆ ಎಂದು ಟಿ.ವಿ. ರಾಮಚಂದ್ರ ಹೇಳಿದರು.
TV Ramachandra slams government over construction of Mekedatu project, says was it required to destroy 5 thousand hecter land to do this project.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm