ಬ್ರೇಕಿಂಗ್ ನ್ಯೂಸ್
12-08-24 12:27 pm Bangalore Correspondent ಕರ್ನಾಟಕ
ಬೆಂಗಳೂರು, ಆ 12: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿ ಬೊಬ್ಬಿರಿದಿರುವ ಮಳೆ ಇದೀಗ ರಾಜಧಾನಿ ಬೆಂಗಳೂರಿನಲ್ಲೂ ಆರ್ಭಟಿಸಿದೆ. ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿರುವ ಘಟನೆ ಅಮೃತಹಳ್ಳಿಯ ಮುನಿಸ್ವಾಮಪ್ಪ ಲೇಔಟ್ನಲ್ಲಿ ನಡೆದಿದೆ. ರಾತ್ರಿ ಆರಂಭವಾದ ಅನಿರೀಕ್ಷಿತ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು, ಇಡೀ ರಾತ್ರಿ ಏರಿಯಾದ ನಿವಾಸಿಗಳು ನಿದ್ರೆಯಿಲ್ಲದೆ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗೆ ಮನೆ ಸಾಮಗ್ರಿಗಳನ್ನು ರಕ್ಷಿಸಿಕೊಳ್ಳಲು ಪರದಾಡಿದ ಏರಿಯಾದ ಜನ ಬೆಳಗ್ಗೆ ಮಳೆ ನಿಂತ ಬಳಿಕ ಕೆಸರುಮಯವಾದ ಮನೆಗಳನ್ನು ಸ್ವಚ್ಛಗೊಳಿಸುವುದರಲ್ಲಿ ತೊಡಗಿದ್ದಾರೆ.
ಪ್ರತಿ ಬಾರಿ ಮಳೆ ಬಂದಾಗ ಇದೇ ಸ್ಥಿತಿ; ಮತ್ತೊಂದೆಡೆ ಏರಿಯಾದ ಇಡೀ ರಸ್ತೆಗಳು ಜಲಾವೃತಗೊಂಡಿದ್ದು, ಮನೆಯಿಂದ ಹೊರಬರುವುದೇ ದುಸ್ತರವಾಗಿದೆ. ಪ್ರತೀ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮನೆಯಲ್ಲಿರುವ ಸಾಮಗ್ರಿಗಳು ಹಾನಿಗೊಳಗಾಗುತ್ತಿವೆ. ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗುತ್ತಿದೆ' ಎನ್ನುತ್ತಿರುವ ಜನರು, ಮಳೆಯ ಮುನ್ಸೂಚನೆ ಇದ್ದರೂ ಸಹ ಮುನ್ನೆಚ್ಚರಿಕೆ ವಹಿಸದ ಪಾಲಿಕೆಯ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.





ಬಿಟಿಎಂ, ಸಿಟಿ ಮಾರ್ಕೆಟ್ ರಸ್ತೆಗಳು ಜಲಾವೃತ :
ಮಳೆಗೆ ಬನಶಂಕರಿ, ಬಿಟಿಎಂ ಲೇಔಟ್, ಬಸವನಗುಡಿ ಕೆ.ಆರ್.ಮಾರ್ಕೆಟ್, ಜೆ.ಸಿ.ರಸ್ತೆ, ರಾಜಾಜಿನಗರ, ವಿಜಯನಗರ, ಕಾಮಾಕ್ಷಿಪಾಳ್ಯ, ಯಶವಂತಪುರ ಸೇರಿದಂತೆ ಬಹುತೇಕ ಏರಿಯಾಗಳಲ್ಲಿ ಭಾನುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಆರಂಭವಾದ ಮಳೆ ಬೆಳಗ್ಗೆವರೆಗೂ ಸುರಿದಿದೆ. ಪರಿಣಾಮ ಕೆಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ನಿರಂತರ ಮಳೆಯಿಂದಾಗಿ ಬಿಟಿಎಂ ಲೇಔಟ್ನ 2ನೇ ಹಂತದ ಬಹುತೇಕ ಏರಿಯಾಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಚೆನ್ನೈ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ, ಸಿಲ್ಕ್ ಬೋರ್ಡ್, ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ. ಇತ್ತ ಅಂಡರ್ಪಾಸ್ನಲ್ಲಿ ನೀರು ನಿಂತ ಪರಿಣಾಮ ಆಂಬ್ಯುಲೆನ್ಸ್ ಕೆಟ್ಟು ನಿಂತ ಘಟನೆ ಓಕಳಿಪುರಂನಲ್ಲಿ ನಡೆದಿದೆ.
ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಮುಂಭಾಗ ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಕೆ. ಆರ್. ಮಾರ್ಕೆಟ್ ಸುತ್ತಮುತ್ತಲಿನ ಚಿಕ್ಕಪೇಟೆ, ಸುಲ್ತಾನ್ ಪೇಟೆ, ಬಳೆಪೇಟೆ, ಕಾಟನ್ ಪೇಟೆ ಸಂಪರ್ಕಿಸುವ ರಸ್ತೆಗಳು ನೀರು ತುಂಬಿಕೊಂಡು ಸಂಚಾರ ಅಸ್ತವ್ಯಸ್ತವಾಗಿದೆ. ಮಳೆ ಸೃಷ್ಟಿಸಿರುವ ಅವಾಂತರದಿಂದಾಗಿ ಬೆಳಗ್ಗೆ ಕೆಲಸಕ್ಕೆ ತೆರಳುವವರೂ ಸಹ ಕಿರಿಕಿರಿ ಅನುಭವಿಸುವಂತಾಗಿದ್ದು, ಇಂದೂ ಸಹ ಮಳೆಯಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.
Bengaluru has been hit by moderate to heavy rains early this morning, leading to localized waterlogging across various parts of the city. The traffic department has issued an alert for slow-moving traffic on several key roads. Stay updated and plan your travel accordingly.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm