ಬ್ರೇಕಿಂಗ್ ನ್ಯೂಸ್
13-08-24 11:44 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದ್ದು ತೀರ್ಪು ಪ್ರಕಟಿಸದೆ ಕಾಯ್ದಿರಿಸಿದೆ. ಹೀಗಾಗಿ ಯಾವ ರೀತಿಯ ತೀರ್ಪು ಬರುತ್ತೋ ಎನ್ನುವ ನಡುಕ ಡಿಕೆ ಶಿವಕುಮಾರ್ಗೆ ಶುರುವಾಗಿದೆ.
ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಕುರಿತು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ನ್ಯಾ.ಉಮೇಶ್ ಎಂ ಅವರಿದ್ದ ಪೀಠ ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಡಿಕೆ ಶಿವಕುಮಾರ್ಗೆ ಕೋರ್ಟ್ ಏನು ತೀರ್ಪು ಕೊಡುತ್ತೆ ಎನ್ನುವ ಟೆನ್ಷನ್ ಶುರುವಾಗಿದೆ.
2019ರಲ್ಲಿ ಆಡಳಿತಲ್ಲಿದ್ದ ಬಿಜೆಪಿ ಸರಕಾರವು ಡಿ.ಕೆ. ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಅನುಮತಿ ನೀಡಿತ್ತು. ಅದನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾಗೊಳಿಸಿತ್ತು. ಆನಂತರ ಅವರು ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ, ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬಂದ ನಂತರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು 2023ರ ನ.28ರಂದು ಹಿಂಪಡೆದಿತ್ತು.
ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಕಡೆಯಿಂದ ನೀಡಲಾಗಿದ್ದ ಮೇಲ್ಮನವಿಯನ್ನೂ ಹಿಂಪಡೆಯಲಾಗಿತ್ತು. ಇದರಂತೆ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿದ್ದನ್ನು ಆಕ್ಷೇಪಿಸಿ ಮತ್ತು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆನಂತರ ಸಿಬಿಐ ಕೂಡ ಸರಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ನ ಮೊರೆ ಹೋಗಿತ್ತು. ಸರ್ಕಾರದ ನಿರ್ಧಾರ ತಪ್ಪೆಂದು ಕೋರ್ಟ್ ತೀರ್ಪು ನೀಡಿದರೆ, ಅದರಿಂದ ಡಿಕೆಶಿಗೆ ಸಂಕಷ್ಟ ಎದುರಾಗಲಿದೆ.
The Karnataka High Court on Monday reserved its order on the petitions filed by the Central Bureau of Investigation and BJP MLA Basangouda Patil Yatnal challenging the State government's decision to withdraw consent for CBI probe into corruption allegations against Congress leader and Karnataka's Deputy Chief Minister DK Shivakumar.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm