ಬ್ರೇಕಿಂಗ್ ನ್ಯೂಸ್
14-08-24 06:08 pm HK News Desk ಕರ್ನಾಟಕ
ಬೆಳಗಾವಿ, ಆಗಸ್ಟ್.14: ಕಾಂಗ್ರೆಸ್ ಸರ್ಕಾರದಿಂದ ನೀಡಲಾಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ. ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು. ಇದರಿಂದ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ಜಾರಕಿಹೊಳಿ ಹೇಳಿದ್ದಾರೆ.
ಈ ವರ್ಷದ ಆರಂಭದಲ್ಲಿ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕಾಗಿ ರೂ. 52,000 ಕೋಟಿ ಮೀಸಲಿಟ್ಟಿರುವುದಾಗಿ ಘೋಷಿಸಿದ್ದರು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಪಕ್ಷದ ವರಿಷ್ಠರನ್ನು ಭೇಟಿ ಮಾಡಿದಾಗ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವಂತೆ ನಾನೇನು ಹೇಳಿಲ್ಲ. ಈ ಗ್ಯಾರಂಟಿ ಯೋಜನೆಗಳು ಬಡವರಿಗೆ ತಲುಪಬೇಕು, ಶ್ರೀಮಂತರಿಗೆ ಬೇಡ ಎಂದು ಜನ ಹೇಳುತ್ತಿದ್ದಾರೆ. ಹೋಟೆಲ್ ಗಳಲ್ಲಿ, ಕೆಲಸಗಾರರು ಸೇರಿದಂತೆ ಎಲ್ಲೆಡೆಯೂ ಇದೇ ಚರ್ಚೆಯಾಗುತ್ತಿದೆ. ಶ್ರೀಮಂತರಿಗೆ ಯಾಕೆ ನೀಡುತ್ತಿದ್ದೀರಿ? ಬಡವರಿಗೆ ನೀಡಿ ಎಂದು ಪ್ರತಿಪಕ್ಷಗಳು ಕೂಡಾ ಕೇಳಿವೆ ಎಂದರು.
ಯೋಜನೆಗಳ ಪರಿಷ್ಕರಣೆಯಿಂದ ಸರ್ಕಾರದಿಂದ ಜನಪ್ರಿಯತೆ ಹೆಚ್ಚಲಿದೆ. ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಲು ಯಾರು ಹೇಳಿದ್ದು? ಅದನ್ನು ನಾವು ಸ್ಥಗಿತಗೊಳಿಸುವುದಿಲ್ಲ. ಇದರ ಬಗ್ಗೆ ಕ್ಯಾಬಿನೆಟ್ ಹಾಗೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆದಿಲ್ಲ. ಇದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದರು.
Karnataka Minister Satish Jarkiholi on Wednesday said the guarantee schemes need to be reviewed so that only the economically weaker sections, and not the rich, benefit from them, sparking a debate on the ambitious programmes launched by the Congress government.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm