ಬ್ರೇಕಿಂಗ್ ನ್ಯೂಸ್
17-08-24 06:23 pm Bangalore Correspondent ಕರ್ನಾಟಕ
ಬೆಂಗಳೂರು, ಆ.17: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಇಂದು ಅರಮನೆ ಮೈದಾನದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ ಎಂದು ದೂರಿದರು.
ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ:
ತನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟಿಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗೆ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ದನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಹೇಳಿದರು.
Karnataka Chief Minister Siddaramaiah on Saturday ruled out his resignation, following the Governor granting sanction to prosecute him, in connection with the Mysuru Urban Development Authority (MUDA) site allotment 'scam', and said he had done no wrong to step down. Terming Governor Thaawarchand Gehlot's decision as "anti-Constitution and against law," he said. It will be questioned in court and that he will battle it out legally.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 09:43 pm
Mangalore Correspondent
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm