ಬ್ರೇಕಿಂಗ್ ನ್ಯೂಸ್
17-08-24 09:36 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್.17: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ ನಲ್ಲಿ ಕೇವಿಯಟ್ ಅರ್ಜಿ ದಾಖಲಾಗಿದೆ. ಹೈಕೋರ್ಟ್ ವಕೀಲ ಎಸ್.ಪಿ.ಪ್ರದೀಪ್ ಕುಮಾರ್ ಕೇವಿಯಟ್ ಅರ್ಜಿ ಸಲ್ಲಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯಪಾಲರು ನೀಡಿರುವ ತನಿಖೆಯ ಅನುಮತಿಯನ್ನು ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದರೆ ಆಗ ನಮ್ಮ ವಾದ ಆಲಿಸದೆ ಯಾವುದೇ ಆದೇಶ ಮಾಡಬಾರದು ಎಂದು ಅರ್ಜಿಯಲ್ಲಿ ಕೋರಿದ್ದಾರೆ.
ಮುಡಾ ಹಗರಣವನ್ನು ತನಿಖೆಗೆ ಒಳಪಡಿಸಲು ಆದೇಶಿಸಬೇಕು ಎಂದು ಕೋರಿ ಎಸ್.ಪಿ.ಪ್ರದೀಪ್ ಕುಮಾರ್ ಈಗಾಗಲೇ "ಜನಪ್ರತಿನಿಧಿಗಳ ವಿಶೇಷ ಕೋರ್ಟ್" ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮುಡಾದಲ್ಲಿ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎಂಬ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ಧರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದರು.

ಕೇವಿಯಟ್ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅರ್ಜಿದಾರ ಪ್ರದೀಪ್ ಕುಮಾರ್, ‘ಕಾನೂನು ಪ್ರಕಾರ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೊರೆ ಹೋಗಬಹುದು, ಕೇವಿಯಟ್ ಇಲ್ಲದೇ ಹೋದರೆ ಅವರಿಗೆ ರಿಲೀಫ್ ಸಿಗಬಹುದು. ಹೀಗಾಗಿ, ನಾನು ಕೇವಿಯಟ್ ಸಲ್ಲಿಸಿದ್ದೇನೆ ಎಂದಿದ್ದಾರೆ.
ಕರ್ನಾಟಕ ಸರ್ಕಾರ ಅಥವಾ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಮಂಜೂರಾತಿಗೆ ಸಂಬಂಧಿಸಿದಂತೆ ಯಾವುದೇ ಕಾನೂನು ಕ್ರಮಗಳನ್ನು ಇನ್ನೂ ಕೈಗೊಂಡಿಲ್ಲ. ಅಂತೆಯೇ ಪ್ರಕರಣದ ಮತ್ತೊಬ್ಬ ದೂರುದಾರ ಟಿಜೆ ಅಬ್ರಹಾಂ ಅವರು ಕೂಡ ಸೋಮವಾರ ಕೇವಿಯಟ್ ಸಲ್ಲಿಸುವುದಾಗಿ ಹೇಳಿದ್ದಾರೆ. ಯಾವುದೇ ಪ್ರಕರಣದಲ್ಲಿ ಅರ್ಜಿಗೆ ಮೊದಲೇ ನಿಗದಿತ ವಿಚಾರದಲ್ಲಿ ಕೇವಿಯಟ್ ಸಲ್ಲಿಸಿದ್ದರೆ, ಕೋರ್ಟ್ ತುರ್ತು ತೀರ್ಪು ನೀಡುವುದಕ್ಕೆ ಕಷ್ಟವಾಗುತ್ತದೆ.
One of the complainants in the MUDA 'scam' case on Saturday filed a caveat in the Karnataka High Court after Governor Thaawarchand Gehlot granted permission to prosecute Chief Minister Siddaramaiah.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 08:29 pm
HK News Staffer
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm