ಬ್ರೇಕಿಂಗ್ ನ್ಯೂಸ್
18-08-24 11:08 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18: ಮುಂದಿನ ಆರು ತಿಂಗಳಲ್ಲಿ ರಾಜ್ಯದ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ, ಅವರ ಭ್ರಷ್ಟಾಚಾರವನ್ನೂ ತೆಗೀತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಗುಡುಗಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲಿದ್ದು, ಮುಂದಿನ ಆರು ತಿಂಗಳಲ್ಲಿ ರಾಜ್ಯದ ಅರ್ಧದಷ್ಟು ಬಿಜೆಪಿ ನಾಯಕರು ಜೈಲಿನಲ್ಲಿರುತ್ತಾರೆ ಅಥವಾ ಜಾಮೀನಿಗಾಗಿ ಓಡಲಿದ್ದಾರೆ ಎಂದರು.
ಬಿಜೆಪಿ ನಾಯಕರ ಮೇಲೆ 35ಕ್ಕೂ ಹೆಚ್ಚು ಪ್ರಕರಣಗಳಿದ್ದು, ಮೂರ್ನಾಲ್ಕು ಪ್ರಕರಣಗಳಲ್ಲಿ ಮಧ್ಯಂತರ ವರದಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಅಪರಾಧ ತನಿಖಾ ಇಲಾಖೆಯ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ಪ್ರಕರಣಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರಕರಣಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ. ಹಿಂದಿನ ಸರ್ಕಾರದಲ್ಲಿ ತೀವ್ರ ಭ್ರಷ್ಟಾಚಾರ ಇತ್ತು. ಅದರ ಮೇಲೆ ಕೆಲಸ ಮಾಡುತ್ತಿದ್ದು, ಮುಂದಿನ ಆರು ತಿಂಗಳಲ್ಲಿ ಅರ್ಧದಷ್ಟು ಬಿಜೆಪಿ ನಾಯಕರು ಜೈಲು ಸೇರೋದು ಖಚಿತ ಎಂದು ಅವರು ಹೇಳಿದರು.
ರಾಜ್ಯಪಾಲರ ಪಾತ್ರದ ಕುರಿತು ಚರ್ಚೆಯಾಗಿರುವ ಹತ್ತಾರು ಪ್ರಕರಣಗಳಿದ್ದು, ಅವುಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದ ಸಚಿವರು, ಬಿಜೆಪಿ ನಾಯಕರ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸಾಧ್ಯವೇ ಇಲ್ಲ. ಹೀಗಾಗಿ ಸಿಬಿಐ, ಐಟಿ, ಇಡಿ ಮತ್ತು ಸ್ವತಃ ರಾಜ್ಯಪಾಲರನ್ನು ಬಳಸಿಕೊಂಡು ಪ್ರಕರಣವನ್ನು ಜೀವಂತವಾಗಿಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
Karnataka Minister Priyank Kharge on Sunday said half of the BJP leaders in the state will either be in jail or running for bail in the next six months as the Congress government will get to the bottom of the corruption cases of the previous BJP government
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 06:05 pm
Mangalore Correspondent
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm