ಬ್ರೇಕಿಂಗ್ ನ್ಯೂಸ್
21-08-24 11:39 am HK News Desk ಕರ್ನಾಟಕ
ಮಂಡ್ಯ, ಆ 21: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ನೆನ್ನೆ ರಾತ್ರಿ ಗಂಡ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.
ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.
Mandya 21 year old house wife suspicious death, husband jumps to lake after family troubles. The deceased have been identified as Swathi and Mohan. Their one year old girl baby is now said to be orphan.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm