ಬ್ರೇಕಿಂಗ್ ನ್ಯೂಸ್
21-08-24 11:39 am HK News Desk ಕರ್ನಾಟಕ
ಮಂಡ್ಯ, ಆ 21: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ನೆನ್ನೆ ರಾತ್ರಿ ಗಂಡ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.
ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.
Mandya 21 year old house wife suspicious death, husband jumps to lake after family troubles. The deceased have been identified as Swathi and Mohan. Their one year old girl baby is now said to be orphan.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm