ಬ್ರೇಕಿಂಗ್ ನ್ಯೂಸ್
21-08-24 11:39 am HK News Desk ಕರ್ನಾಟಕ
ಮಂಡ್ಯ, ಆ 21: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ನೆನ್ನೆ ರಾತ್ರಿ ಗಂಡ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.
ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.
Mandya 21 year old house wife suspicious death, husband jumps to lake after family troubles. The deceased have been identified as Swathi and Mohan. Their one year old girl baby is now said to be orphan.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am