ಬ್ರೇಕಿಂಗ್ ನ್ಯೂಸ್
21-08-24 11:39 am HK News Desk ಕರ್ನಾಟಕ
ಮಂಡ್ಯ, ಆ 21: ಗಂಡನ ಮನೆಯಲ್ಲಿ ಗೃಹಿಣಿಯೊಬ್ಬಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಇದಾದ ಕೆಲವೇ ಗಂಟೆಗಳಲ್ಲಿ ಗಂಡನ ಶವ ಕೂಡ ಕೆರೆಯಲ್ಲಿ ಪತ್ತೆಯಾಗಿದೆ. ಗಂಡನ ಮನೆಯ ಉಳಿದವರು ನಾಪತ್ತೆಯಾಗಿದ್ದು, ಗೃಹಿಣಿ ಸಾವಿನಿಂದ ಜನರಲ್ಲಿ ಹುಟ್ಟಿಕೊಂಡಿರುವ ಆಕ್ರೋಶದ ಪರಿಣಾಮ ತಲೆ ಮರೆಸಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಆರ್.ಪೇಟೆ ತಾಲೂಕಿನ ಮಂದಗೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಸ್ವಾತಿ (21) ಅನುಮಾನಾಸ್ಪದವಾಗಿ ಮೃತಪಟ್ಟಿರುವ ಗೃಹಿಣಿ. ಮೋಹನ್ (26) ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿಯ ಸಾವಿಗೆ ಹೆದರಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸ್ವಾತಿ ಸಾವು ಆತ್ಮಹತ್ಯೆಯೋ ಕೊಲೆಯೋ ಎಂಬುದು ಖಚಿತವಾಗಿಲ್ಲ. ಇದು ಗಂಡನ ಮನೆಯವರಿಂದ ಆಗಿರುವ ಕೊಲೆ ಎಂದು ಸ್ವಾತಿ ಪೋಷಕರು ಆರೋಪಿಸಿದ್ದಾರೆ.
ನೆನ್ನೆ ರಾತ್ರಿ ಗಂಡ ಮೋಹನ್ ಮನೆಯಲ್ಲಿ ಪತ್ನಿ ಸ್ವಾತಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ಬಳಿಕ ಗಂಡ ಮೋಹನ್ ಹಾಗು ಆತನ ಪೋಷಕರು ಮನೆಯಿಂದ ನಾಪತ್ತೆಯಾಗಿದ್ದರು. ಮೃತ ಯುವತಿಯ ಪೋಷಕರು ಗಂಡ ಹಾಗು ಆತನ ಮನೆಯವರ ವಿರುದ್ಧ ಕೊಲೆ ಆರೋಪ ಮಾಡಿದ್ದು, ರಾತ್ರಿ ಯುವತಿಯ ಸಂಬಂಧಿಕರು ಗಂಡನ ಮನೆಗೆ ನುಗ್ಗಿ ಬೆಂಕಿ ಹಚ್ಚಿ ದಾಂಧಲೆ ಎಸಗಿದ್ದರು.
ಇಂದು ಬೆಳಿಗ್ಗೆ ಕೆರೆಯಲ್ಲಿ ಗಂಡ ಮೋಹನ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದಂಪತಿಗೆ ಒಂದುವರೆ ವರ್ಷದ ಹೆಣ್ಣು ಮಗುವಿದ್ದು, ದಂಪತಿಯ ಸಾವಿನಿಂದ ಅದು ಅನಾಥವಾಗಿದೆ.
Mandya 21 year old house wife suspicious death, husband jumps to lake after family troubles. The deceased have been identified as Swathi and Mohan. Their one year old girl baby is now said to be orphan.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm