ಬ್ರೇಕಿಂಗ್ ನ್ಯೂಸ್
21-08-24 06:49 pm Bangalore Correspondent ಕರ್ನಾಟಕ
ಬೆಂಗಳೂರು, ಆ 21: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸವಾಲು ಹಾಕಿದರು.
ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣದ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ” ಎಂದು ಕೊಪ್ಪಳದಲ್ಲಿ ಹೇಳಿದ್ದರು.
ಇದಕ್ಕೆ ಖಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಮೈಸೂರಿನ ಮುಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡುವುದಕ್ಕೆ ನೂರು ಜನ ಸಿದ್ದರಾಮಯ್ಯರು ಬರಬೇಕು” ಎಂದು ವಾಗ್ದಾಳಿ ನಡೆಸಿದರು.
“ನನಗೆ ಯಾವುದೇ ಭಯ ಇಲ್ಲ. ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ” ಎಂದರು.
ಒಬ್ಬ ಕಾನ್ಸ್ಟೇಬಲ್ ಸಾಕು ;
ಇನ್ನು ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕುಮಾರಸ್ವಾಮಿಗೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್ಟೇಬಲ್ ಸಾಕು ಎಂದು ಟಾಂಗ್ ಕೊಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್ಟೇಬಲ್ ಸಾಕು. ಅರೆಸ್ಟ್ ಮಾಡುವುದು ಯಾರು, ನಾನು ಮಾಡ್ತೀನಾ? ಪೊಲೀಸರು ಮಾಡುತ್ತಾರೆ. ನನಗೆ ಹೆದರಿಕೊಳ್ಳದೆ ಹೋಗಿದ್ದರೆ ಕುಮಾರಸ್ವಾಮಿ ಪ್ರೆಸ್ಮೀಟ್ ಮಾಡುತ್ತಿದ್ದರಾ? ಎಂದು ಲೇವಡಿ ಮಾಡಿದರು.
ಕುಮಾರಸ್ವಾಮಿದು ಬರೀ ಹಿಟ್ ಆ್ಯಂಡ್ ರನ್. ಯಾವ ಪ್ರಕರಣವನ್ನೂ ಕುಮಾರಸ್ವಾಮಿ ಲಾಜಿಕಲ್ ಎಂಡ್ಗೆ ತೆಗೆದುಕೊಂಡು ಹೋಗಿಲ್ಲ. ಪೆನ್ಡ್ರೈವ್, ಪೆನ್ಡ್ರೈವ್ ಅಂದರು ಎಂದು ಅಣುಕಿಸಿ ತೋರಿಸಿದರು.
Need hundreds like Siddaramaiah to arrest me says H D Kumaraswamy. Speaking to media persons CM stated that not 100 Siddaramaiah but one constable is enough to arrest Hd Kumaraswamy he mocked.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm