ಬ್ರೇಕಿಂಗ್ ನ್ಯೂಸ್
21-08-24 06:49 pm Bangalore Correspondent ಕರ್ನಾಟಕ
ಬೆಂಗಳೂರು, ಆ 21: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಸವಾಲು ಹಾಕಿದರು.
ಸಾಯಿ ವೆಂಕಟೇಶ್ವರ ಮಿನರಲ್ಸ್ ಪ್ರಕರಣದ ಬಗ್ಗೆ ಕೇಂದ್ರ ಸಚಿವರು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, “ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂಧಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ” ಎಂದು ಕೊಪ್ಪಳದಲ್ಲಿ ಹೇಳಿದ್ದರು.
ಇದಕ್ಕೆ ಖಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಮೈಸೂರಿನ ಮುಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡುವುದಕ್ಕೆ ನೂರು ಜನ ಸಿದ್ದರಾಮಯ್ಯರು ಬರಬೇಕು” ಎಂದು ವಾಗ್ದಾಳಿ ನಡೆಸಿದರು.
“ನನಗೆ ಯಾವುದೇ ಭಯ ಇಲ್ಲ. ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ” ಎಂದರು.
ಒಬ್ಬ ಕಾನ್ಸ್ಟೇಬಲ್ ಸಾಕು ;
ಇನ್ನು ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ಕುಮಾರಸ್ವಾಮಿಗೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್ಟೇಬಲ್ ಸಾಕು ಎಂದು ಟಾಂಗ್ ಕೊಟ್ಟಿದ್ದಾರೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ನೂರು ಸಿದ್ದರಾಮಯ್ಯ ಅಲ್ಲ, ಒಬ್ಬ ಕಾನ್ಸ್ಟೇಬಲ್ ಸಾಕು. ಅರೆಸ್ಟ್ ಮಾಡುವುದು ಯಾರು, ನಾನು ಮಾಡ್ತೀನಾ? ಪೊಲೀಸರು ಮಾಡುತ್ತಾರೆ. ನನಗೆ ಹೆದರಿಕೊಳ್ಳದೆ ಹೋಗಿದ್ದರೆ ಕುಮಾರಸ್ವಾಮಿ ಪ್ರೆಸ್ಮೀಟ್ ಮಾಡುತ್ತಿದ್ದರಾ? ಎಂದು ಲೇವಡಿ ಮಾಡಿದರು.
ಕುಮಾರಸ್ವಾಮಿದು ಬರೀ ಹಿಟ್ ಆ್ಯಂಡ್ ರನ್. ಯಾವ ಪ್ರಕರಣವನ್ನೂ ಕುಮಾರಸ್ವಾಮಿ ಲಾಜಿಕಲ್ ಎಂಡ್ಗೆ ತೆಗೆದುಕೊಂಡು ಹೋಗಿಲ್ಲ. ಪೆನ್ಡ್ರೈವ್, ಪೆನ್ಡ್ರೈವ್ ಅಂದರು ಎಂದು ಅಣುಕಿಸಿ ತೋರಿಸಿದರು.
Need hundreds like Siddaramaiah to arrest me says H D Kumaraswamy. Speaking to media persons CM stated that not 100 Siddaramaiah but one constable is enough to arrest Hd Kumaraswamy he mocked.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am