ಬ್ರೇಕಿಂಗ್ ನ್ಯೂಸ್
23-08-24 01:04 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 23: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಇತರ ಮೂವರು ಬಿಜೆಪಿಯ ಮಾಜಿ ಸಚಿವರ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ತಾಕೀತು ಮಾಡಿ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್, ಸಂವಿಧಾನದ ಆರ್ಟಿಕಲ್ 163 ರ ಅನ್ವಯ ಸಂಪುಟದ ಅಧಿಕಾರವನ್ನು ಬಳಸಿಕೊಂಡು ಸಂಪುಟ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.
ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಎಚ್.ಡಿ ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ನಾಲ್ಕು ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಕುಮಾರಸ್ವಾಮಿ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಆಗ್ರಹ ಮಾಡಲಾಗುವುದು ಎಂದರು.
ರಾಜ್ಯಪಾಲರು ಸಲಹೆಯನ್ನು ನಿರಾಕರಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಚ್.ಕೆ. ಪಾಟೀಲ್, ರಾಜ್ಯಪಾಲರ ವಿವೇಚನಾ ಅಧಿಕಾರ ಸೀಮಿತವಾಗಿದ್ದು, ನಮ್ಮ ತೀರ್ಮಾನಕ್ಕೆ ಬದ್ಧವಾಗಿರಬೇಕು. ಅವರು ತಮ್ಮ ಅಧಿಕಾರವನ್ನು ಬಹಳ ವಿವೇಚನೆಯಿಂದ ಚಲಾಯಿಸುವ ಖಾತ್ರಿಯಿದೆ. ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ. "ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19, 17ಎ ಮತ್ತು ಈಗ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್ಎಸ್ಎಸ್) ಸೆಕ್ಷನ್ 197 ಮತ್ತು 218 ಅಪರಾಧ ಪ್ರಕ್ರಿಯೆ ಸಂಹಿತೆಯಡಿ ಅನುಮತಿ ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಶಶಿಕಲಾ ಜೊಲ್ಲೆ ವಿರುದ್ಧ 2021ರ ಡಿಸೆಂಬರ್ 9 ರಂದು ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಫೆಬ್ರವರಿ 26, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17ಎ ಅಡಿಯಲ್ಲಿ ಲೋಕಾಯುಕ್ತರು ಪೂರ್ವಾನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೂರನೆಯದು ಕುಮಾರಸ್ವಾಮಿ ಅವರ ವಿರುದ್ಧ ನವೆಂಬರ್ 21, 2023 ರಂದು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19 ರ ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು, ಎಸ್ ಐಟಿ ಆರೋಪ ಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಕೋರಿದ್ದ ಸ್ಪಷ್ಟನೆಗೆ ಆಗಸ್ಟ್ 16, 2024ರಂದು ಎಸ್ ಐಟಿ ಅಗತ್ಯ ಸ್ಪಷ್ಟನೆ ನೀಡಿದೆ ಎಂದು ತಿಳಿಸಿದರು.
ನಾಲ್ಕನೆಯದು ಜನಾರ್ದನ ರೆಡ್ಡಿಗೆ ಸಂಬಂಧಿಸಿದ್ದು, ಅವರ ವಿರುದ್ಧ ಮೇ 13, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19 ಮತ್ತು ಬಿಎನ್ಎಸ್ಎಸ್ನ ನಿಬಂಧನೆಗಳ ಅಡಿಯಲ್ಲಿ ಪ್ಯಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು,ಈ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
The Karnataka Cabinet on Thursday recommended Governor Thawar Chand Gehlot to take action on pending prosecution sanctions against several prominent political leaders, including Union minister for heavy industry and steel HD Kumaraswamy.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm