ಬ್ರೇಕಿಂಗ್ ನ್ಯೂಸ್
23-08-24 01:04 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 23: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಇತರ ಮೂವರು ಬಿಜೆಪಿಯ ಮಾಜಿ ಸಚಿವರ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ತಾಕೀತು ಮಾಡಿ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಸಚಿವ ಎಚ್. ಕೆ.ಪಾಟೀಲ್, ಸಂವಿಧಾನದ ಆರ್ಟಿಕಲ್ 163 ರ ಅನ್ವಯ ಸಂಪುಟದ ಅಧಿಕಾರವನ್ನು ಬಳಸಿಕೊಂಡು ಸಂಪುಟ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.
ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಹಾಗೂ ಎಚ್.ಡಿ ಕುಮಾರಸ್ವಾಮಿ ಹಾಗೂ ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಅನುಮತಿ ಕೋರಲಾಗಿತ್ತು. ನಾಲ್ಕು ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಕುಮಾರಸ್ವಾಮಿ ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರಿಗೆ ಆಗ್ರಹ ಮಾಡಲಾಗುವುದು ಎಂದರು.
ರಾಜ್ಯಪಾಲರು ಸಲಹೆಯನ್ನು ನಿರಾಕರಿಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಎಚ್.ಕೆ. ಪಾಟೀಲ್, ರಾಜ್ಯಪಾಲರ ವಿವೇಚನಾ ಅಧಿಕಾರ ಸೀಮಿತವಾಗಿದ್ದು, ನಮ್ಮ ತೀರ್ಮಾನಕ್ಕೆ ಬದ್ಧವಾಗಿರಬೇಕು. ಅವರು ತಮ್ಮ ಅಧಿಕಾರವನ್ನು ಬಹಳ ವಿವೇಚನೆಯಿಂದ ಚಲಾಯಿಸುವ ಖಾತ್ರಿಯಿದೆ. ರಾಜ್ಯಪಾಲರ ಮುಂದೆ ಭ್ರಷ್ಟಾಚಾರ ತಡೆ ಕಾಯ್ದೆ 1980 ಅಡಿಯಲ್ಲಿ ತನಿಖಾ ಸಂಸ್ಥೆಗಳು ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅನುಮತಿ ಅರ್ಜಿ ಬಾಕಿ ಇದೆ. "ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19, 17ಎ ಮತ್ತು ಈಗ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್ಎಸ್ಎಸ್) ಸೆಕ್ಷನ್ 197 ಮತ್ತು 218 ಅಪರಾಧ ಪ್ರಕ್ರಿಯೆ ಸಂಹಿತೆಯಡಿ ಅನುಮತಿ ಕೋರಲಾಗಿದೆ ಎಂದು ತಿಳಿಸಿದ್ದಾರೆ.
ಶಶಿಕಲಾ ಜೊಲ್ಲೆ ವಿರುದ್ಧ 2021ರ ಡಿಸೆಂಬರ್ 9 ರಂದು ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಫೆಬ್ರವರಿ 26, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17ಎ ಅಡಿಯಲ್ಲಿ ಲೋಕಾಯುಕ್ತರು ಪೂರ್ವಾನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಮೂರನೆಯದು ಕುಮಾರಸ್ವಾಮಿ ಅವರ ವಿರುದ್ಧ ನವೆಂಬರ್ 21, 2023 ರಂದು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19 ರ ಅಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು, ಎಸ್ ಐಟಿ ಆರೋಪ ಪಟ್ಟಿ ಸಲ್ಲಿಸಿದೆ. ರಾಜ್ಯಪಾಲರು ಕೋರಿದ್ದ ಸ್ಪಷ್ಟನೆಗೆ ಆಗಸ್ಟ್ 16, 2024ರಂದು ಎಸ್ ಐಟಿ ಅಗತ್ಯ ಸ್ಪಷ್ಟನೆ ನೀಡಿದೆ ಎಂದು ತಿಳಿಸಿದರು.
ನಾಲ್ಕನೆಯದು ಜನಾರ್ದನ ರೆಡ್ಡಿಗೆ ಸಂಬಂಧಿಸಿದ್ದು, ಅವರ ವಿರುದ್ಧ ಮೇ 13, 2024 ರಂದು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19 ಮತ್ತು ಬಿಎನ್ಎಸ್ಎಸ್ನ ನಿಬಂಧನೆಗಳ ಅಡಿಯಲ್ಲಿ ಪ್ಯಾಸಿಕ್ಯೂಷನ್ ಗೆ ಅನುಮತಿ ಕೋರಲಾಗಿದ್ದು,ಈ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
The Karnataka Cabinet on Thursday recommended Governor Thawar Chand Gehlot to take action on pending prosecution sanctions against several prominent political leaders, including Union minister for heavy industry and steel HD Kumaraswamy.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm