ಬ್ರೇಕಿಂಗ್ ನ್ಯೂಸ್
26-08-24 04:52 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 26: ದರ್ಶನ್ ಕೈಯಲ್ಲಿ ಸಿಗರೇಟು ಹಿಡಿದು ಕುಳಿತಿರುವ ಫೋಟೋ ನೋಡಿ ನಮಗೆ ಶಾಕ್ ಆಯ್ತು, ಕುರ್ಚಿ ಮೇಲೆ ಕುಳಿತು ಚಹ, ಸಿಗರೇಟ್ ಹಿಡಿದು ಕೂತಿದ್ದಾರೆ. ರೆಸಾರ್ಟ್ ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಇಂಥ ದೃಶ್ಯ ನಮ್ಮ ಹೊಟ್ಟೆ ಉರಿಸುತ್ತದೆ ಎಂದು ಕೊಲೆ ಆರೋಪಿ ದರ್ಶನ್ ರಾಜಾತಿಥ್ಯದ ಫೋಟೊ ನೋಡಿ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ನ್ಯಾಯಾಂಗ ಆತನಿಗೆ ಮನೆ ಊಟ ಕೊಟ್ಟಿಲ್ಲ. ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಆದರೆ ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು ಜೈಲು ಆಗಿರ್ಬೇಕು, ಮತ್ತೊಂದು ಆಗಿರಬಾರ್ದು. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ನನ್ನ ಮಗನಿಗೆ ಶಾಂತಿ ಸಿಗಬೇಕು, ಅವರಿಗೆ ಶಿಕ್ಷೆಯಾಗಬೇಕು.

ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು. ಕೈಮುಗಿದು ಸರ್ಕಾರವನ್ನ ನಾನು ಕೇಳುತ್ತೇನೆ. ಸರ್ಕಾರ, ಪೊಲೀಸರು, ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ಮಗನ ಸಾವಿಗೆ ಇಡೀ ರಾಜ್ಯ ದುಃಖ ಪಟ್ಟಿದೆ. ಗೃಹ ಸಚಿವರು ಕೂಡಾ ಈ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಕೇಳಿಕೊಂಡಿದ್ದಾರೆ.
ನಮ್ಮ ಮನೆಯವರೆಲ್ಲ ಕಣ್ಣೀರಲ್ಲಿ ಕೈತೊಳೆದಿದ್ದೇವೆ. ಇಂಥವರಿಗೆ ಮನುಷ್ಯತ್ವ ಇದಿಯಾ? ದಿನ ಬೆಳಕಾದ್ರೆ ಸೊಸೆ ಜೀವನ ನೆನೆದು ಸಂಕಟ ಆಗುತ್ತದೆ. ಅದರ ಮಧ್ಯೆ ಇಂಥ ದೃಷ್ಯ ನೋಡಿ ನಮ್ಮ ಹೊಟ್ಟೆ ಉರಿಸುತ್ತದೆ. ದಯವಿಟ್ಟು ಸರ್ಕಾರ ನಡೆಸೋರು ಅರ್ಥ ಮಾಡಿಕೊಂಡು ಸಮಗ್ರ ತನಿಖೆ ಮಾಡಬೇಕು. ಈ ರೀತಿ ಆಗುವುದರಿಂದ ಸರ್ಕಾರದ ಮೇಲೆ ನಂಬಿಕೆ ಹೋಗುತ್ತದೆ. ಹೀಗಾದರೆ ಸಿಬಿಐ ತನಿಖೆಯನ್ನೇ ನಡೆಸಬೇಕು ಎಂದು ಶಿವನಗೌಡರ್ ಒತ್ತಾಯಿಸಿದ್ದಾರೆ.
Royal treatment for actor Darshan in jail, victim Renukaswamy father cries. A photo of actor Darshan with rowdy sheeter Wilson Naga and team went viral on social media alleging that prison authorities have been giving in royal treatment inside the prison
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm