ಬ್ರೇಕಿಂಗ್ ನ್ಯೂಸ್
26-08-24 04:52 pm HK News Desk ಕರ್ನಾಟಕ
ಚಿತ್ರದುರ್ಗ, ಆಗಸ್ಟ್ 26: ದರ್ಶನ್ ಕೈಯಲ್ಲಿ ಸಿಗರೇಟು ಹಿಡಿದು ಕುಳಿತಿರುವ ಫೋಟೋ ನೋಡಿ ನಮಗೆ ಶಾಕ್ ಆಯ್ತು, ಕುರ್ಚಿ ಮೇಲೆ ಕುಳಿತು ಚಹ, ಸಿಗರೇಟ್ ಹಿಡಿದು ಕೂತಿದ್ದಾರೆ. ರೆಸಾರ್ಟ್ ನಲ್ಲಿ ಕುಳಿತಂತೆ ಕುಳಿತಿದ್ದಾರೆ. ಇಂಥ ದೃಶ್ಯ ನಮ್ಮ ಹೊಟ್ಟೆ ಉರಿಸುತ್ತದೆ ಎಂದು ಕೊಲೆ ಆರೋಪಿ ದರ್ಶನ್ ರಾಜಾತಿಥ್ಯದ ಫೋಟೊ ನೋಡಿ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ.
ನ್ಯಾಯಾಂಗ ಆತನಿಗೆ ಮನೆ ಊಟ ಕೊಟ್ಟಿಲ್ಲ. ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಆದರೆ ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು ಜೈಲು ಆಗಿರ್ಬೇಕು, ಮತ್ತೊಂದು ಆಗಿರಬಾರ್ದು. ಸಿಎಂ ಸಿದ್ದರಾಮಯ್ಯ ಅವರು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದಿದ್ದಾರೆ. ನನ್ನ ಮಗನಿಗೆ ಶಾಂತಿ ಸಿಗಬೇಕು, ಅವರಿಗೆ ಶಿಕ್ಷೆಯಾಗಬೇಕು.
ಸರ್ಕಾರ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು. ಕೈಮುಗಿದು ಸರ್ಕಾರವನ್ನ ನಾನು ಕೇಳುತ್ತೇನೆ. ಸರ್ಕಾರ, ಪೊಲೀಸರು, ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನನ್ನ ಮಗನ ಸಾವಿಗೆ ಇಡೀ ರಾಜ್ಯ ದುಃಖ ಪಟ್ಟಿದೆ. ಗೃಹ ಸಚಿವರು ಕೂಡಾ ಈ ಬಗ್ಗೆ ಗಮನ ಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಅವರು ಕೇಳಿಕೊಂಡಿದ್ದಾರೆ.
ನಮ್ಮ ಮನೆಯವರೆಲ್ಲ ಕಣ್ಣೀರಲ್ಲಿ ಕೈತೊಳೆದಿದ್ದೇವೆ. ಇಂಥವರಿಗೆ ಮನುಷ್ಯತ್ವ ಇದಿಯಾ? ದಿನ ಬೆಳಕಾದ್ರೆ ಸೊಸೆ ಜೀವನ ನೆನೆದು ಸಂಕಟ ಆಗುತ್ತದೆ. ಅದರ ಮಧ್ಯೆ ಇಂಥ ದೃಷ್ಯ ನೋಡಿ ನಮ್ಮ ಹೊಟ್ಟೆ ಉರಿಸುತ್ತದೆ. ದಯವಿಟ್ಟು ಸರ್ಕಾರ ನಡೆಸೋರು ಅರ್ಥ ಮಾಡಿಕೊಂಡು ಸಮಗ್ರ ತನಿಖೆ ಮಾಡಬೇಕು. ಈ ರೀತಿ ಆಗುವುದರಿಂದ ಸರ್ಕಾರದ ಮೇಲೆ ನಂಬಿಕೆ ಹೋಗುತ್ತದೆ. ಹೀಗಾದರೆ ಸಿಬಿಐ ತನಿಖೆಯನ್ನೇ ನಡೆಸಬೇಕು ಎಂದು ಶಿವನಗೌಡರ್ ಒತ್ತಾಯಿಸಿದ್ದಾರೆ.
Royal treatment for actor Darshan in jail, victim Renukaswamy father cries. A photo of actor Darshan with rowdy sheeter Wilson Naga and team went viral on social media alleging that prison authorities have been giving in royal treatment inside the prison
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm