ಬ್ರೇಕಿಂಗ್ ನ್ಯೂಸ್
27-08-24 01:41 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 27: ಆರ್ಎಸ್ಎಸ್ ಇಲ್ಲದ ಕಾರಣ ಇಂಡೋನೇಷ್ಯಾದಲ್ಲಿ ಗಲಭೆಗಳಿಲ್ಲ ಎಂದು ನಟ ಪ್ರಕಾಶ್ ರಾಜ್ ಅವರು ಹೇಳಿದ್ದಾರೆಂಬ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಈ ಹೇಳಿಕೆಯನ್ನು ಪ್ರಕಾಶ್ ರಾಜ್ ಅವರು ನಿರಾಕರಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ @MeghUpdates ಎಂಬ ಖಾತೆಯಲ್ಲಿ ಪ್ರಕಾಶ್ ರಾಜ್ ಹೇಳಿಕೆಯೆಂದು ಪೋಸ್ಟ್ ಹಾಕಲಾಗಿದೆ. ಆರೆಸ್ಸೆಸ್ ಇದ್ದ ಕಡೆ ಗಲಭೆಗಳು ಆಗುತ್ತವೆ ಎಂದ ಪ್ರಕಾಶ್ ರಾಜ್ ಪರೋಕ್ಷವಾಗಿ ಹೇಳಿದ್ದನ್ನು ಉಲ್ಲೇಖ ಮಾಡಲಾಗಿದೆ. ಇಂಡೋನೇಷ್ಯಾವನ್ನು ಉದಾಹರಣೆಯಾಗಿ ನೀಡಿರುವ ಪ್ರಕಾಶ್ ರಾಜ್, ಶೇ.90 ಮುಸ್ಲಿಮರು, ಶೇ.2ರಷ್ಟು ಹಿಂದೂಗಳು ಹಾಗೂ 11 ಸಾವಿರ ಮಂದಿರಗಳು ಇಂಡೋನೇಷ್ಯಾದಲ್ಲಿ ಇವೆ. ಆದರೆ ಅಲ್ಲಿ ಆರ್ಎಸ್ಎಸ್ ಇಲ್ಲ. ಹಾಗಾಗಿ ಗಲಭೆಗಳು ನಡೆಯಲ್ಲ ಎಂದು ಹೇಳಿದ್ದಾರೆಂದು ಪೋಸ್ಟ್ ಹಾಕಲಾಗಿದೆ.
ಈ ಪೋಸ್ಟ್ ಸಾಕಷ್ಟು ವೈರಲ್ ಆಗಿದ್ದು, ಕೆಲವರು ಪ್ರಕಾಶ್ ರಾಜ್ ಅವರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ, ಹಲವರು ವಿರೋಧ ವ್ಯಕ್ತಪಡಿಸಿ, ಟೀಕಿಸುತ್ತಿದ್ದಾರೆ. ಈ ನಡುವೆ ಜಾಲತಾಣದಲ್ಲಿಯೇ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದು, ಈ ರೀತಿಯ ಹೇಳಿಕೆಯನ್ನು ನಾನು ನೀಡಿಯೇ ಇಲ್ಲ, ಇಂತಹ ಪೋಸ್ಟ್ ಗಳನ್ನು ಸೃಷ್ಟಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ. ನನ್ನ ವಕೀಲರೊದಿಗೆ ಮಾತುಕತೆ ನಡೆಸಲಾಗಿದೆ, ಈ ಬಗ್ಗೆ ಮಂಗಳವಾರ ಕಾನೂನು ಸಮರ ಶುರುವಾಗಲಿದೆ. ಈಗಾಗಲೇ ಟ್ವಿಟರ್ ಗೂ ದೂರು ನೀಡಲಾಗಿದೆ ಎಂದು ಹೇಳಿದ್ದಾರೆ. ಬಲಪಂಥೀಯರು ನನ್ನನ್ನು ಬಿಜೆಪಿ, ಮೋದಿ ಮತ್ತು ಅಮಿತ್ ಶಾ ಅವರ ವಿರುದ್ಧ ಇರುವ ಕಾರಣಕ್ಕಾಗಿಯೇ ಹಿಂದೂಗಳ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ. ಇಂಥ ಹೇಳಿಕೆ ನೀಡಬೇಕಿದ್ದರೆ @MeghUpdates ನೀವೇ ನೀಡಿ, ನನ್ನ ಹೆಸರು ಬಳಸಿ ಹೇಳಿಕೆ ನೀಡಬೇಡಿ. ನಾನು ಮೂರು ದಿನಗಳಿಂದ ರಂಗಭೂಮಿಯ ಕಾರ್ಯಕ್ರಮದಲ್ಲಿ ನಿರತನಾಗಿದ್ದೆ. ಇದ್ದಕ್ಕಿದ್ದಂತೆ ಪೋಸ್ಟ್ ನೋಡಿದೆ. ಸಾಕಷ್ಟು ಜನರು ಟೀಕೆ ಮಾಡುತ್ತಿದ್ದು, ಕೋಪಗೊಂಡಿದ್ದಾರೆಂದು ತಿಳಿಸಿದ್ದಾರೆ.
Lashing out at the RSS and Bhartiya Janta party (BJP), the acclaimed actor in a recent statement questioned why there are no reports of riots in Indonesia despite its religious diversity. In the statement that has triggered outrage among Hindutva sympathizers on social media, the actor said, “Indonesia is a Muslim-majority country with 90 percent Muslims and barely 2 percent Hindus.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm