ಬ್ರೇಕಿಂಗ್ ನ್ಯೂಸ್
28-08-24 09:53 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ನಟ ದರ್ಶನ್ಗೆ ರಾಜಾತಿಥ್ಯ ನೀಡಿರುವುದಕ್ಕೆ ರಾಜ್ಯದ ಪ್ರಭಾವಿ ಸಚಿವರೇ ಕಾರಣ ಎನ್ನುವ ಮಾತು ಕೇಳಿಬಂದಿದೆ. ಪ್ರಭಾವಿ ಸಚಿವರ ಮೌಖಿಕ ಆದೇಶದಂತೆ ವಿಶೇಷ ಆತಿಥ್ಯ ನೀಡಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಬ್ಲಿಕ್ ಟಿವಿ ವರದಿ ಮಾಡಿದೆ.
ಪ್ರಭಾವಿ ಸಚಿವರೊಬ್ಬರು ದರ್ಶನ್ಗೆ ವಿಶೇಷ ಸೌಲಭ್ಯ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ, ಜೈಲು ಸಿಬ್ಬಂದಿಯೂ ದರ್ಶನ್ ಖ್ಯಾತ ನಟನಾಗಿರುವ ಕಾರಣ ಜೈಲಿನ ನಿಯಮಗಳನ್ನು ಪಾಲಿಸಿರಲಿಲ್ಲ.
ಜೈಲಿನ ಒಳಗಡೆ ಕೈದಿಗೆ ಚೇರ್ ನೀಡಬೇಕಾದರೂ ಸಿಬಂದಿ ಮೇಲಧಿಕಾರಿಗಳ ಅನುಮತಿ ಪಡೆಯಬೇಕು. ಅನಾರೋಗ್ಯ ಇತ್ಯಾದಿ ಕಾರಣಕ್ಕೆ ಜೈಲು ವೈದ್ಯರು ಸೂಚಿಸಿದರೆ ಮಾತ್ರ ಕೈದಿಗೆ ಚಯರ್ ಮೇಲೆ ಕುಳಿತುಕೊಳ್ಳಲು ಅನುಮತಿ ನೀಡಲಾಗುತ್ತದೆ. ಆದರೆ ದರ್ಶನ್ ಮತ್ತೊಬ್ಬ ನಟೋರಿಯಸ್ ರೌಡಿ ವಿಲ್ಸನ್ ನಾಗ ಎಂಬಾತನ ಜೊತೆಗೆ ಚಯರ್ ನಲ್ಲಿ ಕುಳಿತು ಚಹಾ, ಸಿಗರೇಟು ಸೇವನೆ ಮಾಡುತ್ತಿರುವ ಫೋಟೊ ವೈರಲ್ ಆಗಿತ್ತು. ಅಲ್ಲಿ ಒಟ್ಟು ನಾಲ್ಕು ಮಂದಿಗೆ ಒಟ್ಟಿಗೆ ಚಯರ್ ನಲ್ಲಿ ಕುಳಿತುಕೊಂಡಿದ್ದರು.
ಇದಕ್ಕೆಲ್ಲ ಪ್ರಭಾವಿ ಸಚಿವರ ಮೌಖಿಕ ಆದೇಶವೇ ಕಾರಣ ಎನ್ನಲಾಗುತ್ತಿದೆ. ಆ ವ್ಯಕ್ತಿಯ ಸೂಚನೆಯಂತೆ ಜೈಲಿನ ಅಧಿಕಾರಿಗಳು ದರ್ಶನ್ ಕೈದಿಯಾಗಿದ್ದರೂ ವಿಐಪಿ ಸೌಲಭ್ಯ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ರಾಜಾತಿಥ್ಯ ಕಾರಣಕ್ಕೆ ಏಳು ಮಂದಿ ಜೈಲು ಅಧಿಕಾರಿಗಳು ಸಸ್ಪೆಂಡ್ ಆಗಿದ್ದು ಯಾರದ್ದೋ ಆಟ, ಇನ್ಯಾರಿಗೋ ಸಂಕಟ ಎನ್ನುವಂತಾಗಿದೆ.
Public TV kannada exposes popular ministers interference in giving darshan special treatment in jail.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 09:49 pm
Mangaluru Staffee
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm