ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm