ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm