ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
11-08-25 08:55 pm
HK News Desk
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
ಭಾರತದ ವಿರುದ್ಧ ಟ್ರಂಪ್ ಸುಂಕಾಸ್ತ್ರಕ್ಕೆ ಅಮೆರಿಕದ ತ...
09-08-25 11:09 pm
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
11-08-25 07:39 pm
Mangalore Correspondent
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
Kudla Rampage YouTuber, Ajay Anchan Case: ಬೈಕ...
11-08-25 11:38 am
ಹೊಸ್ತಿಲು ಬರೆದು, ಪಾತ್ರೆ ತೊಳೆದು, ದೇವರ ಸ್ತೋತ್ರ ಹ...
10-08-25 04:32 pm
11-08-25 12:37 pm
Mangalore Correspondent
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm