ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am