ಬ್ರೇಕಿಂಗ್ ನ್ಯೂಸ್
28-08-24 11:07 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 28: ಸೀಬರ್ಡ್ ನೌಕಾನೆಲೆಯ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಿ ಏಜಂಟರಿಗೆ ರವಾನಿಸುತ್ತಿದ್ದ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಕಾರವಾರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ತೋಡೂರಿನ ಸುನೀಲ್ ನಾಯ್ಕ, ಮುದಗಾದ ವೇತನ್ ತಾಂಡೇಲ್, ಅಂಕೋಲಾ ಹಳವಳ್ಳಿಯ ಅಕ್ಷಯ ನಾಯ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಹಣಕ್ಕಾಗಿ ಕದಂಬ ನೌಕಾನೆಲೆಯ ಫೋಟೋ, ಇತರೆ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್ಐ ಏಜಂಟರಿಗೆ ರವಾನಿಸುತ್ತಿದ್ದ ಆರೋಪ ಇವರ ಮೇಲಿದೆ. ಆರೋಪಿಗಳು ಈ ಹಿಂದೆ ಸೀಬರ್ಡ್ ನೌಕಾನೆಲೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಎನ್ಐಎ ಡಿವೈಎಸ್ಪಿ ನೇತೃತ್ವದಲ್ಲಿ ಮೂವರು ಇನ್ಸಪೆಕ್ಟರ್, ಕಾರವಾರ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ದೇಶ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಆರೋಪದಲ್ಲಿ 2023ರಲ್ಲಿ ಹೈದರಾಬಾದ್ನಲ್ಲಿ ದೀಪಕ್ ಎಂಬಾತನನ್ನು ಎನ್ಐಎ ಅರೆಸ್ಟ್ ಮಾಡಿದ್ದು ಆ ಸಂದರ್ಭದಲ್ಲಿ ವಿದೇಶಿ ನೆಟ್ವರ್ಕ್ ಪತ್ತೆಯಾಗಿತ್ತು. ದೇಶದ ಒಳಗಿನ ರಹಸ್ಯಗಳನ್ನು ಹಣಕ್ಕಾಗಿ ಮಾರಾಟ ಮಾಡುತ್ತಿದ್ದಾರೆಂಬ ಮಾಹಿತಿಯೂ ಸಿಕ್ಕಿತ್ತು. ದೀಪಕ್ ಹಾಗೂ ಇತರರ ತನಿಖೆ ವೇಳೆ ಕಾರವಾರದ ಮೂವರ ಹೆಸರು ತಿಳಿದುಬಂದಿತ್ತು. ಸೀಬರ್ಡ್ ನೌಕಾನೆಲೆಯ ಫೋಟೋ, ಮಾಹಿತಿ ರವಾನಿಸಿ ಕಾರ್ಮಿಕರು ಹಣ ಪಡೆದಿದ್ದರು. ಆಬಳಿಕ ಅಂಕೋಲಾದ ಅಕ್ಷಯ ನಾಯ್ಕ ನೌಕಾನೆಲೆ ತೊರೆದು ಗೋವಾದಲ್ಲಿ ಹೊಟೇಲ್ ಕೆಲಸಕ್ಕೆ ಸೇರಿದ್ದ. ಇದೀಗ ರಹಸ್ಯ ಕಾರ್ಯಾಚರಣೆಯಲ್ಲಿ ಮೂವರನ್ನು ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ. ಮೊಬೈಲ್ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
ಆರೋಪಿಗಳು ಹನಿಟ್ರಾಪ್ ಬಲೆಗೆ ಬಿದ್ದು ವಿದೇಶಿ ನೆಟ್ವರ್ಕ್ ಜೊತೆಗೆ ಶಾಮೀಲಾಗಿದ್ದರೆ, ಕೇವಲ ಹಣಕ್ಕಾಗಿ ಈ ಕೃತ್ಯ ಮಾಡಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
Seabird Shipyard Secret Leak, NIA operation in Karwar, three arrested for info to Pakistani agents.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm