ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm