ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
23-07-26 01:51 pm
HK News Staffer
CJP ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ತುರ್ತು ವ...
22-07-26 02:32 pm
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am