ಬ್ರೇಕಿಂಗ್ ನ್ಯೂಸ್
30-08-24 11:24 am HK News Desk ಕರ್ನಾಟಕ
ಕಾರವಾರ, ಆ 30: ಕೈದಿಗಳಿಬ್ಬರು ರಂಪಾಟ ಮಾಡಿ, ತಲೆ ಒಡೆದುಕೊಂಡಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಜೈಲಿನೊಳಗೆ ಬಹಳಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ, ಸೂಕ್ತ ಸೌಲಭ್ಯವಿಲ್ಲ ಹಾಗೂ ಹೊರಗಿನಿಂದ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗಲು ಬಿಡುತ್ತಿಲ್ಲ. ತಮಗೆ ತಂಬಾಕು ಸಿಗುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಗಳ ಜೊತೆ ರಗಳೆ ತೆಗೆದಿದ್ದಾರೆ ಎನ್ನಲಾಗಿದೆ.
ಜೈಲಿನಲ್ಲಿ ಗಲಾಟೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ, ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಭದ್ರತೆ ನೀಡಿದ್ದರು. ಅಲ್ಲದೇ ಜೈಲಿನ ಒಳಗೆ ಹೋಗಿ ಕೈದಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು. ಗಲಾಟೆ ಮಾಡಿ ಗಾಯಗೊಂಡವರು ದಾಂಡೇಲಿಯ ಮುಜಾಮಿಲ್ ಹಾಗೂ ಕುಮಟಾದ ಫರಾನ್ ಛಬ್ಬಿ ಎನ್ನುವರಾಗಿದ್ದಾರೆ. ಕಲ್ಲಿನಿಂದ ಹೊಡೆದುಕೊಂಡು ಗಾಯ ಮಾಡಿಕೊಂಡಿದ್ದ ಇಬ್ಬರ ತಲೆಗೆ ಬಟ್ಟೆ ಸುತ್ತಿ, ಕಾರವಾರದ ಕ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಕೈದಿಗಳನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ, ತಮಗೆ ಜೈಲು ಅಧಿಕಾರಿಗಳು ಮನಬಂದಂತೆ ಥಳಿಸಿದ್ದಾರೆ. ಈ ಗಲಾಟೆಗೆ ಜೈಲು ಅಧಿಕಾರಿಗಳೇ ಕಾರಣ ಎಂದು ಆರೋಪ ಮಾಡುತ್ತ ತೆರಳಿದರು. ಆದರೆ, ಈ ಬಗ್ಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ಕೈದಿಗಳ ಆರೋಪವು ಸುಳ್ಳು ಎಂದು ತಳ್ಳಿಹಾಕಿದ್ದಾರೆ.
''ಕೈದಿಗಳು ಗಲಾಟೆ ಮಾಡಿಕೊಳ್ಳುತ್ತಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಜೈಲಿಗೆ ತೆರಳಿ ಪರಿಶೀಲಿಸಲಾಗಿದೆ. ಜೈಲಿನಲ್ಲಿ ತಪಾಸಣೆ ಬಿಗಿಗೊಳಿಸಿದ್ದರಿಂದ ಮತ್ತು ಸರಿಯಾಗಿ ಊಟ ನೀಡುವಂತೆ ಗಲಾಟೆ ನಡೆಸಿದ್ದರು. ಆರಂಭದಲ್ಲಿ ಗಲಾಟೆ ಬಗ್ಗೆ ಕೇಳಿದಾಗ ಜೈಲಾಧಿಕಾರಿಗಳು ಹಲ್ಲೆ ಮಾಡಿರುವುದಾಗಿ ನಮಗೂ ದೂರಿದ್ದರು. ಬಳಿಕ ಜೈಲಿನಲ್ಲಿ ಪರಿಶೀಲನೆ ನಡೆಸಿ, ಕೈದಿಗಳು ಹಾಗೂ ಜೈಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದು, ಸಿಸಿ ಕ್ಯಾಮರಾ ಪರಿಶೀಲನೆ ನಡೆಸಿದಾಗ ಇಬ್ಬರೂ ಕಲ್ಲಿನಿಂದ ಮೂರ್ನಾಲ್ಕು ಬಾರಿ ಹೊಡೆದುಕೊಂಡಿರುವುದು ಖಚಿತವಾಗಿದೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ'' ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ. ಜಯಕುಮಾರ್ ತಿಳಿಸಿದ್ದಾರೆ.
Karwar jail inmates break head and fight, two hospitalized
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 04:14 pm
HK News Staffer
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
ಚರಕದಿಂದ ನೂಲು ತೆಗೆದು, ಸಮುದ್ರ ಕಿನಾರೆಯಲ್ಲಿ ಉಪ್ಪು...
15-08-26 10:08 pm
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm